2:06 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ‘ನಮ್ಮ ಕ್ಲಿನಿಕ್’ ಯೋಜನೆ: ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಾಳೆ 4 ಕ್ಲಿನಿಕ್ ಉದ್ಘಾಟನೆ

13/12/2022, 19:09

ಮಂಗಳೂರು(reporterkarnataka.com):
ನಗರ ಪ್ರದೇಶಗಳಲ್ಲಿ ಸಾರ್ವಜನಿಕರ ಸೇವೆಗಾಗಿ ರಾಜ್ಯ ಸರಕಾರವು ರೂಪಿಸಿರುವ ನಮ್ಮ ಕ್ಲಿನಿಕ್ ಯೋಜನೆಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4 ಕ್ಲಿನಿಕ್ ಗಳು ನಾಳೆ ಉದ್ಘಾಟನೆಗೊಳ್ಳಲಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.

ಗರ್ಭಿಣಿ ಹಾರೈಕೆ, ಶಿಶುವಿನ ಹಾರೈಕೆ, ಮಕ್ಕಳ ಸೇವೆ, ಕುಟುಂಬ ಕಲ್ಯಾಣ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಂಪೂರ್ಣ ಓಪಿಡಿ ಸೇವೆಗಳು, ಮಧುಮೇಹ, ರಕ್ತದೊತ್ತಡ ಚೆಕ್ ಅಪ್ ,ಕ್ಯಾನ್ಸರ್ ಸ್ಕ್ರೀನಿಂಗ್ ಸೇವೆ, ಬಾಯಿ ಆರೋಗ್ಯ ಸಮಸ್ಯೆಗಳು ಸೇವೆ, ಕಣ್ಣಿನ ತಪಾಸಣೆ, ಮೂಗು, ಗಂಟಲು ENT ಸೇವೆಗಳು, ಮಾನಸಿಕ ಆರೋಗ್ಯ ಸ್ಕ್ರೀನಿಂಗ್ ಸೇವೆ, ವೃದ್ಧಾಪ್ಯ ಆರೈಕೆ ಸೇರಿದಂತೆ ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಒಟ್ಟು 12 ಪ್ರಮುಖ ಆರೋಗ್ಯ ಸೇವೆಗಳು ನಮ್ಮ ಕ್ಲಿನಿಕ್ ನಲ್ಲಿ ಲಭ್ಯವಿರಲಿದ್ದು, ಎಲ್ಲಾ ಸೇವೆಗಳು ಉಚಿತವಾಗಿ ಸಿಗಲಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈಗಾಗಲೇ ಗುರುತಿಸಿರುವಂತೆ ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯ ಸುಂಕದಕಟ್ಟೆ, ಸೂಟರ್ ಪೇಟೆ, ಬೋಳೂರು ಹಾಗೂ ಹೈೂಗೆಬಜಾರ್ ಪ್ರದೇಶಗಳಲ್ಲಿ ನಾಳೆ ನಮ್ಮ ಕ್ಲಿನಿಕ್ ಉದ್ಘಾಟನೆಗೊಳ್ಳುತಿದೆ. ನಮ್ಮ ಸರಕಾರವು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವ ಮಹತ್ತರವಾದ ಕಾರ್ಯ ಕೈಗೊಂಡಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು