7:30 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಫೋಟೋ ಜರ್ನಲಿಸ್ಟ್ ದಯಾ ಕುಕ್ಕಾಜೆಗೆ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ

13/12/2022, 22:41

ಪುತ್ತೂರು(reporterkarnataka.com): ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಆಂಡ್ ಕಲ್ಟರ್ ಸಂಸ್ಥೆ ಆಯೋಜಿಸಿದ್ದ 2022ರ ಜಾಗತಿಕ ಛಾಯಾಗ್ರಹಣ ಸ್ಪರ್ಧೆಯ ಸೀಸನ್-3ರಲ್ಲಿ ಮಂಗಳೂರಿನ ಖ್ಯಾತ ಫೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ ‘ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ’ ಪಡೆದಿದ್ದಾರೆ.

ದಯಾನಂದ ಕುಕ್ಕಾಜೆ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಗಿದೆ. ಈ ಹಿಂದೆ ಅವರು ಅತ್ಯುತ್ತಮ ಕ್ಯಾಂಡಿಡ್ ಆಕ್ಷನ್ ಛಾಯಾಗ್ರಹಣ ಪ್ರಶಸ್ತಿ ಮತ್ತು ಅತ್ಯುತ್ತಮ ಕ್ಯಾಂಡಿಡ್ ಛಾಯಾಗ್ರಹಣ ಪ್ರಶಸ್ತಿ ಪಡೆದಿದ್ದರು. ಗ್ಲೋಬಲ್ ಫೋಟೋಗ್ರಫಿ ಕಾಂಟೆಸ್ಟ್ 2022 ರ ಸೀಸನ್-3 ನ್ನು ಭಾರತದ ಛಾಯಾಗ್ರಾಹಕರು ಮತ್ತು ಹಲವಾರು ದೇಶಗಳ ಎನ್‌ಆರ್‌ಐಗಳ ನಡುವೆ ನಡೆಸಲಾಗಿತ್ತು.

ಕುಕ್ಕಾಜೆ ಅವರು 12ಕ್ಕೂ ಹೆಚ್ಚು ಛಾಯಾಚಿತ್ರ ಪ್ರದರ್ಶನಗಳನ್ನು ಆಯೋಜಿಸಿದ್ದು ಅವರು ತಮ್ಮ ಛಾಯಾಗ್ರಹಣ ಕೌಶಲ್ಯವನ್ನು ಪ್ರದರ್ಶಿಸಲು ಆರಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದಾರೆ. ಮಾಣಿಲ ಗ್ರಾಮದ ಕುಕ್ಕಾಜೆ ನಿವಾಸಿಯಾಗಿರುವ ದಯಾರವರು ಡೈಜಿವರ್ಲ್ಡ್ ವಾಹಿನಿಯ ಪ್ರಮುಖ ಛಾಯಾಗ್ರಾಹಕರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು