12:29 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ!: ಗಾಜಿನ ಚಾವಣಿಯಬೆಂಗಳೂರು- ಮಂಗಳೂರು ಟ್ರೈನ್ ಜು.7ರಂದು ಆರಂಭ

04/07/2021, 19:13

ಮಂಗಳೂರು(reporterkarnataka news): ಶಿರಾಡಿ ಘಾಟಿಯ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಬೆಂಗಳೂರು- ಮಂಗಳೂರು ರೈಲು ಸಂಚಾರ ಜುಲೈ 7ರಿಂದ ಆರಂಭವಾಗಲಿದೆ.

ಬೆಂಗಳೂರು- ಮಂಗಳೂರು ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಬೋಗಿಗಳನ್ನು ಜೋಡಿಸಲಾಗುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಬಹುದಾಗಿದೆ.

ಗಾಜಿನ ಚಾವಣಿಯ ಬೋಗಿಯೊಳಗೆ 360 ಡಿಗ್ರಿಯಲ್ಲಿ ಸುತ್ತುವ ಆಸನದ ವ್ಯವಸ್ಥೆ ಅಳವಡಿಸಲಾಗಿದೆ. ಪಾರದರ್ಶಕ ಗಾಜಿನ ಕೋಚ್ ಆಗಿರುವುದರಿಂದ ಪ್ರಯಾಣಿಕರು ತನ್ನ ಇಕ್ಕಲೆಗಳ ಪ್ರಕೃತಿ ಸೊಬಗಿನ ಜತೆಗೆ ಎತ್ತರದ ಬೆಟ್ಟ, ಗಿರಿ, ಕಾನನ ಹಾಗೂ ಜಲಪಾತಗಳ ವೈಭವವನ್ನು ಕುಳಿತಲ್ಲೇ ಸವಿಯಬಹುದಾಗಿದೆ. ಬೋಗಿಯಲ್ಲಿ ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಮೈಕ್ರೋ ಓವೆನ್, ಸಣ್ಣ ಫ್ರಿಡ್ಜ್ ಮತ್ತು ಎಸಿ ಸೌಲಭ್ಯವಿರುತ್ತದೆ. ಟಿಕೆಟ್ ದರ 1470 ರೂ. ನಿಗದಿಪಡಿಸಲಾಗಿದೆ. ಮೊದಲ ರೈಲು ಜುಲೈ 7ರಂದು ಯಶವಂತಪುರ ಜಂಕ್ಷನ್ ನಿಂದ ಹೊರಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು