1:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರ: ರಾಜ್ಯ ಸರ💐ಕಾರದ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

14/12/2022, 22:38

ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ರಾಜ್ಯ ಸರಕಾರದ ನಮ್ಮ ಕ್ಲಿನಿಕ್” ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು.

ಅವರು ಪಚ್ಚನಾಡಿಯಲ್ಲಿ ನೂತನ ನಮ್ಮ ಕ್ಲಿನಿಕ್ ಕೇಂದ್ರವನ್ನು
ಉದ್ಘಾಟಿಸಿ, ಮೀನಕಳಿಯ, ಮರಕಡ ಸಹಿತ ಮೂರು ಕಡೆ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ.

ಪಚ್ಚನಾಡಿ ಸುತ್ತಮುತ್ತಲಿನ ಜನರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಶಕ್ತಿನಗರ ಇಲ್ಲವೇ ಬೊಂದೆಲ್ ಕೇಂದ್ರವನ್ನು ಅವಲಂಬಿಸಿದ್ದರು.
ಇದೀಗ ಈ ಸಮಸ್ಯೆ ತಪ್ಪಿದಂತಾಗಿದೆ.

ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಇಲ್ಲಿ ತಪಾಸಣೆ, ರಕ್ತ ತಪಾಸಣೆ, ದಂತ, ಕಣ್ಣು, ಮಹಿಳಾ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲ್ಯಾನ್, ಪಾಲಿಕೆ ಸದಸ್ಯೆ ಸಂಗೀತ ರವೀಂದ್ರ , ವೈದ್ಯಾಧಿಕಾರಿ ಡಾ. ರಾಜೇಶ್, ನಮ್ಮ ಕ್ಲಿನಿಕ್ ನ ನೂತನ ವೈದ್ಯಾಧಿಕಾರಿ ರಾಜೇಶ್ ಚಂದ್ರ ಬಿಎಸ್, ಡಾ.ಚಿರಾಗ್, ಡಾ. ಅಭಿಷೇಕ್, ಆರೋಗ್ಯ ಇಲಾಖೆಯ ಸುದರ್ಶನ್, ಬಿಜೆಪಿ ಪ್ರಮುಖರಾದ ಸಂದೀಪ್ ಪಚ್ಚನಾಡಿ ,ಪೂಜಾ ಪೈ, ಪ್ರಶಾಂತ್ ಪೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು