1:35 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಬಲ್ಲಾಳರಾಯನ ದುರ್ಗ: ಪ್ರವಾಸಿಗರ ಸ್ವರ್ಗ; ಟ್ರಕ್ಕಿಂಗ್ ಪ್ರಿಯರಿಗೆ ಫೆವರೇಟ್ ಸ್ಪಾಟ್

15/12/2022, 20:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕ ರಮ್ಯ ತಾಣ. ಪ್ರತಿ ಪ್ರವಾಸಿಗರಿಗೂ ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತವೈಭವ ವಿಶೇಷತೆ ಕಳೆದುಕೊಂಡಿದ್ರೂ ನಿಸರ್ಗದ ಚೆಲುವು ಮಾತ್ರ ಮಾಸಿಲ್ಲ. ಪ್ರಕೃತಿ ಹಾಗೂ ಟ್ರಕ್ಕಿಂಗ್ ಪ್ರಿಯರನ್ನ ಬಾ ಎಂದು ಕೈಬೀಸಿ ಕರೆಯುತ್ತಿರೋ ಇಲ್ಲಿನ ಸೌಂದರ್ಯ ಪ್ರವಾಸಿಗರು, ಟ್ರಕ್ಕಿಂಗ್ ಪ್ರಿಯರಿಗೆ ಹಾಟ್ ಫೆವರೇಟ್ ಸ್ಪಾಟ್. ಆ ಸುಂದರ ರಮಣೀಯ ತಾಣವೇ ಬಲ್ಲಾಳರಾಯನ ದುರ್ಗದ ಕೋಟೆ.


*ಪ್ರವಾಸಿಗರಿಗೆ ಸವಾಲೆಸೆಯೋ ನಿಸರ್ಗದ ಮಡಿಲು:*
ಕಣ್ಣು ಹಾಯಿಸಿದಷ್ಟು ದೂರಕ್ಕೆ ಕಾಣೋ ನೈಜ ಸ್ವರ್ಗದ ಚೆಲುವು. ದಿಟ್ಟಿಸಿ ನೋಡುದ್ರೆ ಕೊನೆಯೇ ಇಲ್ಲವೆಂಬಂತೆ ಕಾಣೋ ಕೋಟೆಯ ಬೃಹದಾಕಾರದ ಗೋಡೆ. ಪ್ರತೀ ಹೆಜ್ಜೆಯಲ್ಲೂ ಪ್ರವಾಸಿಗರಿಗೆ ಸವಾಲೆಸೆಯೋ ನಿಸರ್ಗದ ಮಡಿಲು. ಹೌದು….. ಇದು ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಬಲ್ಲಾಳರಾಯನ ದುರ್ಗದ ಕೋಟೆ. ಮೂಡಿಗೆರೆ ತಾಲೂಕಿನಲ್ಲಿದೆ. ರುದ್ರ ರಮಣೀಯವಾಗಿ ಕಾಣುವ ಈ ತಾಣವನ್ನ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರು ಬರ್ತಾರೆ. ಅದ್ರಲ್ಲು ಟ್ರಕ್ಕಿಂಗ್ ಪ್ರಿಯರಿಗಂತೂ ಬಲ್ಲರಾಯನ ಕೋಟೆ ಹತ್ತೋದಂದ್ರೆ ಎಲ್ಲಿಲ್ಲದ ಉತ್ಸಾಹ ಹಾಗೂ ಸವಾಲು. ದುರ್ಗದಹಳ್ಳಿಯ ಎಂಡ್ ಪಾಯಿಂಟ್ನಲ್ಲಿ ವಾಹನ ನಿಲ್ಲಿಸಿ ಅರ್ಧ ಕಿ.ಮೀ. ಸಾಗಿದ್ರೆ ಅಬ್ಬಾ… ಅನ್ನೋ ವೀವ್ ಪಾಯಿಂಟ್ ಕಣ್ಣಿಗೆ ಅಪ್ಪಳಿಸುತ್ತೆ. ಈ ಜಾಗದಲ್ಲಿ ನಿಂತು ನೋಡಿದ್ರೆ ಸ್ವರ್ಗಕ್ಕೆ ಮೂರೇ ಗೇಣು ಅನ್ಸತ್ತೆ. ಸುತ್ತಲಿನ ಹಚ್ಚ ಹಸಿರಿನ ವನರಾಶಿ ಮತ್ತೊಂದು ಲೋಕಕ್ಕೆ ಕೊಂಡೊಯ್ಯುತ್ತೆ. ಇಲ್ಲಿಗೆ ಬರೋ ಪ್ರವಾಸಿಗ್ರು ಬಗೆಬಗೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ನಿಸರ್ಗದ ಮಡಿಲಲ್ಲಿ ಕುಣಿದು ಕುಪ್ಪಳಿಸುತ್ತಾರೆ.


*ಗತ ವೈಭವ ಸಾರುವ ಬೃಹದಾಕಾರವಾದ ಗೋಡೆಗಳು:*
ಒಂದನೇ ಬಲ್ಲಾಳರಾಯ, ರಕ್ಷಣಾ ಕೋಟೆಯನ್ನಾಗಿ ಈ ಕೋಟೆ ರಚಿಸಿದ್ದನೆಂಬ ಐತಿಹ್ಯವಿದೆ. ಗತ ವೈಭವವನ್ನ ಸಾರುವ ಕಲ್ಲಿನಿಂದ ನಿರ್ಮಾಣವಾಗಿದ್ದ ಬೃಹದಾಕಾರವಾದ ಗೋಡೆಗಳು ಇಂದಿಗೂ ಅಚ್ಚರಿ ಮೂಡಿಸುತ್ತವೆ. ಕಣ್ಣು ಹಾಯಿಸಿದಷ್ಟು ದೂರ ಗೋಚರಿಸೋ ಹಸಿರ ಪರ್ವತ ರಾಶಿ ಪ್ರವಾಸಿಗರ ಮನಸೂರೆಗೊಳಿಸೋದ್ರ ಜೊತೆ, ಇಲ್ಲಿನ ಪ್ರಪಾತ ಗಟ್ಟಿ ಗುಂಡಿಗೆಯನ್ನು ಒಮ್ಮೆ ನಡುಗಿಸುತ್ತೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನ ವರ್ಣಿಸೋಕೆ ಪದಗಳೇ ಸಾಲದು. ಸುತ್ತಲಿನ ಪರ್ವತಗಳು ನೋಡುಗರನ್ನ ಆಕರ್ಷಿಸಿದ್ರೆ, ಪರ್ವತಗಳ ನಡುವಿನ ಮಂಜು ಮುಸುಕಿದ ನೋಟ ನೋಡುಗರನ್ನ ನಿಬ್ಬೆರಗುಗೊಳಿಸುತ್ತೆ.


ವರ್ಷ ಪೂರ್ತಿ ಧುಮ್ಮಿಕ್ಕೋ ಇಲ್ಲಿನ ರಾಣಿ ಝರಿಯನ್ನ ನೋಡೋದೆ ಪ್ರವಾಸಿಗರಿಗೆ ಎಲ್ಲಿಲ್ಲದ ಖುಷಿ. ಒಟ್ಟಾರೆ, ಬಲ್ಲಾರಾಯನ ಕೋಟೆಯ ವೀವ್ ಪಾಯಿಂಟಾಗಿರೋ ರಾಣಿ ಝರಿ ನೋಟ ಒಂದೊಂದು ಧಿಕ್ಕಲ್ಲಿ ಒಂದೊಂದು ರೀತಿ ಮನೋಜ್ಞವಾಗಿ ಕಾಣ್ತಿದೆ. ಮಳೆಗಾಲದ ಮಂಜು ರಾಣಿ ಝರಿಗೆ ಮುತ್ತಿಕ್ಕುತ್ತಿದ್ದರೆ ನೋಡುಗನ ಕಣ್ಣಿಗೆ ಹಬ್ಬ. ಆದ್ರೆ, ಬೇಸಿಗೆಯಲ್ಲಿ ಈ ರಾಣಿಝರಿಯ ನೋಟ ಪ್ರವಾಸಿಗರ ಎದೆಯನ್ನ ಝಲ್ ಎನಿಸುತ್ತೆ. ಅದೇನೆ ಇದ್ರು, ಇಲ್ಲಿನ ಟ್ರಕ್ಕಿಂಗ್, ಪ್ರಕೃತಿ ಸೌಂದರ್ಯ ಎಲ್ಲವೂ ಅದ್ಭುತವೇ ಸರಿ.

ಇತ್ತೀಚಿನ ಸುದ್ದಿ

ಜಾಹೀರಾತು