2:02 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಬಹು ನಿರೀಕ್ಷಿತ, ಬಹು ತಾರಾಗಣದ ‘ಲಾಸ್ಟ್ ಬೆಂಚ್’ ಕರಾವಳಿಯಾದ್ಯಂತ ನಾಳೆ ತೆರೆಗೆ

15/12/2022, 22:11

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಡಿಸೆಂಬರ್ 16ರಂದು ತೆರೆ ಕಾಣಲಿದೆ.
ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಲಾಸ್ಟ್ ಬೆಂಚ್ ತೆರೆ ಕಾಣಲಿದೆ.

ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಡಿಸೆಂಬರ್ 16 ರಂದು ತೆರೆ ಕಾಣಲಿದೆ.
ಆಶಿಕಾ ಸುವರ್ಣ ನಿರ್ಮಾಪಕರಾಗಿ ಮತ್ತು ಕಿರಣ್ ಶೆಟ್ಟಿ ಸಹ ನಿರ್ಮಾಪಕರಾಗಿದ್ದಾರೆ.

ಮಂಗಳೂರು, ಉಡುಪಿ ಸಹಿತ ಬೇರೆ ಬೇರೆ ಪ್ರದೇಶಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.ಈ ಸಿನಿಮಾಕ್ಕೆ ಒಂದೇ ಹಂತದಲ್ಲಿ‌ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚಿತ್ರೀಕರಣ ನಡೆಸಲಾಗಿದೆ.

ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬಾರ್, ರೂಪೇಶ್ ಶೆಟ್ಟಿ, ವಿನೀತ್ ಕುಮಾರ್, ಅಥರ್ವ ಪ್ರಕಾಶ್ ಪಾಂಡೇಶ್ವರ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ರವಿ ರಾಮಕುಂಜ, ಪ್ರವೀಣ್ ಮರ್ಕಮೆ, ಆರಾಧ್ಯ ಶೆಟ್ಟಿ, ನಿರಿಕ್ಷಾ ಶೆಟ್ಟಿ ಪುತ್ತೂರು, ರೂಪ ವರ್ಕಾಡಿ, ಅನಿತಾ, ಐಸಿರಿ, ಪ್ರಾರ್ಥನಾ ಸುವರ್ಣ, ಮೊದಲಾದ ಬಹು ತಾರಾಗಣ ಈ ಸಿನಿಮಾದಲ್ಲಿದೆ. ಮುಖ್ಯವಾಗಿ ತುಳು ಸಿನಿಮಾರಂಗದ ಖ್ಯಾತ ನಾಮ ಕಲಾವಿದರಾದ ಪೃಥ್ವಿ ಅಂಬಾರ್, ರೂಪೇಶ್ ಶೆಟ್ಟಿ, ವಿನಿತ್ ಕುಮಾರ್ ಮೊದಲ ಬಾರಿಗೆ ಈ ಸಿನಿಮಾದ ಮೂಲಕ ಒಟ್ಟಾಗಿ ಕಾಣಿಸಿಕೊಂಡಿರುವುದು ಈ ಸಿನಿಮಾದ ವಿಶೇಷತೆಯಾಗಿದೆ.

ಮಲ್ಟಿ ಸ್ಟಾರ್ಸ್ ಕಲಾವಿದರ ಜೊತೆಗೆ ಹಾಸ್ಯ ಕಲಾವಿದರ ದೊಡ್ಡ ದಂಡೇ ಈ ಸಿನಿಮಾದಲ್ಲಿ ಇದೆ. ಹೀಗಾಗಿ ನಗುವಿಗೆ ಬರವಿಲ್ಲ. ಅಲ್ಲದೆ ಹೊಸ ಕಲಾವಿದರಿಗೂ ಅಭಿನಯಿಸಲು ನಿರ್ದೇಶಕರು ಅವಕಾಶ ಮಾಡಿ ಕೊಟ್ಟಿದ್ದಾರೆ.

ಪ್ರಧಾನ್ ಎಂಪಿ ನಿರ್ದೇಶನದ ಸಿನಿಮಾಕ್ಕೆ ಕೀರ್ತನ್ ಭಂಡಾರಿ ಮತ್ತು ಸೃಜನ್ ಪೇಜಾವರ್ ಸಾಹಿತ್ಯ- ಸಂಭಾಷಣೆ ರಚಿಸಿದ್ದಾರೆ. ಸಹ ನಿರ್ದೇಶಕರಾಗಿ ರಜು ಬಿಲಿಗಿರಿ, ಆನಂದ್, ಸುಮನ್ ಸುವರ್ಣ, ಹರೀಶ್ ಇದ್ದಾರೆ. ಕ್ಯಾಮರಾ ಪ್ರಸಣ್ಣ ಕುಮಾರ್, ವಿನಾಯಕ ಆಚಾರ್ಯ, ಸಂಕಲನ ಸಚಿನ್, ಸಂಗೀತ ವಿನ್ಯಾಸ್ ಮದ್ಯ,ಈ ಸಿನಿಮಾಕ್ಕೆ ಅಶಿಕಾ ಸುವರ್ಣ ನಿರ್ಮಾಪಕರಾಗಿದ್ದು, ಕಿರಣ್ ಶೆಟ್ಟಿ ಸಹ ನಿರ್ಮಾಪಕರಾಗಿದ್ದಾರೆ. ಕಿಶೋರ್ ಕಾರ್ಯಕಾರಿ ನಿರ್ಮಾಪಕರಾಗಿರುತ್ತಾರೆ.

*ಕಥಾಹಂದರ:* ವಿಐಪೀಸ್ ಲಾಸ್ಟ್ ಬೆಂಚ್ ತುಳುವಿನ ಮೊದಲ ಬಹು ನಾಯಕರಿರುವ ಸಿನಿಮಾ ಆಗಿದೆ. ಇದು ಮೂರು ಬೇಜವಾಬ್ದಾರಿ ಹುಡುಗರ ಕಾಲೇಜು ಜೀವನದ ಕಥೆಯನ್ನು ಹೊಂದಿದೆ. ಆದರೆ ಅವರು ಅತಿಯಾಗಿ ಪ್ರೀತಿಸುತ್ತಿದ್ದ ಬಾಲಕನಿಂದ ಕಥೆಗೆ ಹೊಸ ತಿರುವು ಸಿಗುತ್ತದೆ.
ಈ ಸಿನಿಮಾವು ಹಾಸ್ಯ ಪ್ರಧಾನವಾಗಿದ್ದರೂ ಸೆಂಟಿಮೆಂಟಲ್ ಕಥೆಯನ್ನೂ ಹೊಂದಿದೆ. ಒಂದು ಕಥೆ ಹಾಸ್ಯದ ಹೊನಲು, ಮತ್ತೊಂದು ಭಾವನಾತ್ಮಕ ಸನ್ನಿವೇಶಗಳ ಮಿಶ್ರಣವಾಗಿರುವ ಈ ಕಥೆಯಲ್ಲಿ ಪ್ರೇಕ್ಷಕರಿಗೆ ಹೊಟ್ಟೆ ತುಂಬಾ ನಗಾಡಲು ಯಥೇಚ್ಛ ಅವಕಾಶಗಳಿವೆ. ಕೋಸ್ಟಲ್‌ವುಡ್‌ನ ಖ್ಯಾತನಾಮ ಕಲಾವಿದರೆಲ್ಲರೂ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾವನ್ನು ಮಂಗಳೂರು ಸುತ್ತಮುತ್ತಲಿನ ಹಲವಾರು ಅತ್ಯಾಕರ್ಷಕ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು