5:28 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಜನರ ರಕ್ಷಣೆ, ಸಮಾಜದಲ್ಲಿನ ಬೇಕು ಬೇಡಗಳಿಗೆ ಪೋಲೀಸ್ ಇಲಾಖೆ ದಕ್ಷತೆಯಿಂದ ಶ್ರಮಿಸುತ್ತಿದೆ: ಎಸಿಪಿ ನಟರಾಜ್

04/07/2021, 21:36

ಸುರತ್ಕಲ್(reporterkarnataka news): ಸರಕಾರಿ ಇಲಾಖೆಯಲ್ಲಿ ಅತಿ ಪಾರದರ್ಶಕತೆ ಹಾಗೂ ನೇಮಕಾತಿಯಲ್ಲಿ ಪೋಲೀಸ್ ಇಲಾಖೆಯು ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯ ಇಲಾಖೆಯಾಗಿದೆ. ಜನರ ರಕ್ಷಣೆ ಮಾತ್ರವಲ್ಲದೇ ಸಮಾಜದಲ್ಲಿನ ಬೇಕುಬೇಡಗಳನ್ನು ಕೂಡಾ ಸರಿದೂಗಿಸುವಲ್ಲಿ ಪೋಲೀಸ್ ಇಲಾಖೆಯು ಅತ್ಯಂತ ದಕ್ಷವಾಗಿ ಶ್ರಮವಹಿಸುತ್ತಿವೆ ಎಂದು ಮಂಗಳೂರು ನಗರ ಸಂಚಾರಿ ವಿಭಾಗದ ಸಹಾಯಕ ಆಯುಕ್ತ ಎಮ್.ಎ ನಟರಾಜ್  ಹೇಳಿದರು. 

ಅವರು ಕಾಟಿಪಳ್ಳ ಅಭ್ಯುದಯ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಮಂಗಳಪೇಟೆ ಶ್ರೀಶಾರದಾ ಭಜನಾ ಮಂದಿರದಲ್ಲಿ ಆದಿತ್ಯವಾರದಂದು ಜರುಗಿದ ೧೯ ವರ್ಷದಿಂದ ೨೭ ವರ್ಷದ ಒಳಗಿನ ಯುವಕ- ಯುವತಿಯರಿಗೆ ನಾಗರಿಕ ಪೋಲೀಸ್ ಕಾನ್ಸ್ ಸ್ಟೇಬಲ್ ನೇಮಕಾತಿ ಉದ್ಯೋಗದ ಮಾಹಿತಿ ಶಿಬಿರವನ್ನು 

ಉದ್ಘಾಟಿಸಿ ಪೋಲೀಸ್ ಅಕಾಂಕ್ಷಿ ಅಭ್ಯರ್ಥಿಗಳಿಗೆ ಮಾಹಿತಿ ನೀಡುತ್ತಾ, ಪೋಲೀಸ್ ಇಲಾಖೆಯ ಎಸ್ ಐ, ಪಿಸಿ ಹುದ್ದೆಗಳಿಗೆ ಸೇರಲು ಈಗಾಗಲೇ  ರಾಜದಾದ್ಯಂತ ನೇಮಕಾತಿಗಳು ನಡೆಯುತ್ತಿದ್ದು ಯುವಜನಾಂಗಕ್ಕೆ ಇದು ಪೂರಕವಾಗಿದ್ದು ತಮ್ಮ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಮಾಜದಲ್ಲಿ ಅತ್ಯುನ್ನತ ಹುದ್ದೆಯನ್ನು ಪಡೆಯಲು ಸಾಧ್ಯವಾಗುವುದು ಪೋಲೀಸ್ ಇಲಾಖೆಯಲ್ಲಿ ಮಾತ್ರ ಎಂದು ಪೋಲೀಸ್ ಅಕಾಂಕ್ಷಿ ಯುವಸಮೂಹಕ್ಕೆ ನೇಮಕಾತಿಯ ಕುರಿತು ಮಾಹಿತಿ ನೀಡಿದರು. ಶಿಬಿರದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ವಾದಿರಾಜ್, ಗಣೇಶಪುರ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಮನಪಾ ಸದಸ್ಯ ಲೋಕೇಶ್ ಬೊಳ್ಳಾಜೆ, ಸುರತ್ಕಲ್ ಪೊಲೀಸ್ ಠಾಣಾ ಎಸ್ ಐ ಚಂದ್ರಶೇಖರ್ ಉಪಸ್ಥಿತರಿದ್ದರು.

ಪೋಲೀಸ್ ನಾಗರಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಗೊಂಡ ಸಿಬ್ಬಂದಿಗಳಾದ ಸುನೀಲ್, ವೆಂಕಟೇಶ್‌ ಮಾಹಿತಿ ಶಿಬಿರದಲ್ಲಿ ನೇಮಕಾತಿಯ ಕುರಿತು ಮಾಹಿತಿ ನೀಡಿದರು. ದೀಕ್ಷಿತ್‌ ಕುಲಾಲ್ ಸ್ವಾಗತಿಸಿದರು. ವಿಕಾಸ್ ಶೆಟ್ಟಿ ವಂದಿಸಿದರು.
ಭರತ್ ರಾಜ್ ಕುತ್ತೆತ್ತೂರು‌ ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು