8:48 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಜನರ ರಕ್ಷಣೆ, ಸಮಾಜದಲ್ಲಿನ ಬೇಕು ಬೇಡಗಳಿಗೆ ಪೋಲೀಸ್ ಇಲಾಖೆ ದಕ್ಷತೆಯಿಂದ ಶ್ರಮಿಸುತ್ತಿದೆ: ಎಸಿಪಿ ನಟರಾಜ್

04/07/2021, 21:36

ಸುರತ್ಕಲ್(reporterkarnataka news): ಸರಕಾರಿ ಇಲಾಖೆಯಲ್ಲಿ ಅತಿ ಪಾರದರ್ಶಕತೆ ಹಾಗೂ ನೇಮಕಾತಿಯಲ್ಲಿ ಪೋಲೀಸ್ ಇಲಾಖೆಯು ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯ ಇಲಾಖೆಯಾಗಿದೆ. ಜನರ ರಕ್ಷಣೆ ಮಾತ್ರವಲ್ಲದೇ ಸಮಾಜದಲ್ಲಿನ ಬೇಕುಬೇಡಗಳನ್ನು ಕೂಡಾ ಸರಿದೂಗಿಸುವಲ್ಲಿ ಪೋಲೀಸ್ ಇಲಾಖೆಯು ಅತ್ಯಂತ ದಕ್ಷವಾಗಿ ಶ್ರಮವಹಿಸುತ್ತಿವೆ ಎಂದು ಮಂಗಳೂರು ನಗರ ಸಂಚಾರಿ ವಿಭಾಗದ ಸಹಾಯಕ ಆಯುಕ್ತ ಎಮ್.ಎ ನಟರಾಜ್  ಹೇಳಿದರು. 

ಅವರು ಕಾಟಿಪಳ್ಳ ಅಭ್ಯುದಯ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಮಂಗಳಪೇಟೆ ಶ್ರೀಶಾರದಾ ಭಜನಾ ಮಂದಿರದಲ್ಲಿ ಆದಿತ್ಯವಾರದಂದು ಜರುಗಿದ ೧೯ ವರ್ಷದಿಂದ ೨೭ ವರ್ಷದ ಒಳಗಿನ ಯುವಕ- ಯುವತಿಯರಿಗೆ ನಾಗರಿಕ ಪೋಲೀಸ್ ಕಾನ್ಸ್ ಸ್ಟೇಬಲ್ ನೇಮಕಾತಿ ಉದ್ಯೋಗದ ಮಾಹಿತಿ ಶಿಬಿರವನ್ನು 

ಉದ್ಘಾಟಿಸಿ ಪೋಲೀಸ್ ಅಕಾಂಕ್ಷಿ ಅಭ್ಯರ್ಥಿಗಳಿಗೆ ಮಾಹಿತಿ ನೀಡುತ್ತಾ, ಪೋಲೀಸ್ ಇಲಾಖೆಯ ಎಸ್ ಐ, ಪಿಸಿ ಹುದ್ದೆಗಳಿಗೆ ಸೇರಲು ಈಗಾಗಲೇ  ರಾಜದಾದ್ಯಂತ ನೇಮಕಾತಿಗಳು ನಡೆಯುತ್ತಿದ್ದು ಯುವಜನಾಂಗಕ್ಕೆ ಇದು ಪೂರಕವಾಗಿದ್ದು ತಮ್ಮ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಮಾಜದಲ್ಲಿ ಅತ್ಯುನ್ನತ ಹುದ್ದೆಯನ್ನು ಪಡೆಯಲು ಸಾಧ್ಯವಾಗುವುದು ಪೋಲೀಸ್ ಇಲಾಖೆಯಲ್ಲಿ ಮಾತ್ರ ಎಂದು ಪೋಲೀಸ್ ಅಕಾಂಕ್ಷಿ ಯುವಸಮೂಹಕ್ಕೆ ನೇಮಕಾತಿಯ ಕುರಿತು ಮಾಹಿತಿ ನೀಡಿದರು. ಶಿಬಿರದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ವಾದಿರಾಜ್, ಗಣೇಶಪುರ ಮಹಾಗಣಪತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಮನಪಾ ಸದಸ್ಯ ಲೋಕೇಶ್ ಬೊಳ್ಳಾಜೆ, ಸುರತ್ಕಲ್ ಪೊಲೀಸ್ ಠಾಣಾ ಎಸ್ ಐ ಚಂದ್ರಶೇಖರ್ ಉಪಸ್ಥಿತರಿದ್ದರು.

ಪೋಲೀಸ್ ನಾಗರಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಗೊಂಡ ಸಿಬ್ಬಂದಿಗಳಾದ ಸುನೀಲ್, ವೆಂಕಟೇಶ್‌ ಮಾಹಿತಿ ಶಿಬಿರದಲ್ಲಿ ನೇಮಕಾತಿಯ ಕುರಿತು ಮಾಹಿತಿ ನೀಡಿದರು. ದೀಕ್ಷಿತ್‌ ಕುಲಾಲ್ ಸ್ವಾಗತಿಸಿದರು. ವಿಕಾಸ್ ಶೆಟ್ಟಿ ವಂದಿಸಿದರು.
ಭರತ್ ರಾಜ್ ಕುತ್ತೆತ್ತೂರು‌ ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು