10:42 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೆರೆ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ತಾಯಿ- ಮಗಳು ಸಾವು

20/12/2022, 18:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಮುಳುಗಿ ಸಾವಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪ ನಡೆದಿದೆ.

ಶೋಭಾ (40) ಹಾಗೂ ವರ್ಷಾ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದಾಳೆ. ಆಗ ಮಗಳನ್ನ ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿದ್ದಾಳೆ.

ಮೃತ ಶೋಭಾ ಜೊತೆಯಲ್ಲಿದ್ದ ಮಗ ಚೇತನ್ ಪಾರಾಗಿದ್ದಾನೆ.
ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ನೀರಿನ ಪ್ರಮಾಣ ಕಡಿಮೆ ಇರುವ ಕಡೆ ತಾಯಿ, ಮಗಳು ಹಾಗೂ ಮಗ ದಾಟಲು ಯತ್ನಿಸಿದ್ದಾರೆ.


ಮಗಳು ನೀರಿನ ಪ್ರಮಾಣ ಹೆಚ್ಚಿರುವ ಕಡೆ ಹೋಗಿ ಸಿಲುಕಿಕೊಂಡ ಹಿನ್ನೆಲೆ ರಕ್ಷಣೆಗೆ ತಾಯಿ ತೆರಳಿದ್ದು ಇಬ್ಬರೂ ನೀರು ಪಾಲಾಗಿದ್ದಾರೆ
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು