2:14 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬಸವಣ್ಣ ತಪೋಭೂಮಿ ಕೂಡಲ ಸಂಗಮದಲ್ಲಿ 2023ರ ಶರಣು ಮೇಳ: ಪ್ರಚಾರಕ್ಕೆ ಮಾತೆ ಗಂಗಾದೇವಿ ಆಗಮನ

20/12/2022, 18:40

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ದಯವಿಲ್ಲದ ಧರ್ಮವಾವುದಯ್ಯಾ..?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ..!
ದಯವೇ ಧರ್ಮದ ಮೂಲವಯ್ಯಾ..!

ಜಾತಿ,ಮತ,ಪಂಥ ಭೇದವಿಲ್ಲದೆ ಸರ್ವ ಧರ್ಮ ಸಮಾನತೆ ಸಾರುವ ವಿಶ್ವಗುರು ಬಸವಣ್ಣನವರ ತಪೋಭೂಮಿ ಐಕ್ಯಕ್ಷೇತ್ರ ಕೂಡಲಸಂಗಮದಲ್ಲಿ ಲಿಂಗಾಯತ ಧರ್ಮಿಯರ ವಾರ್ಷಿಕ ಪವಿತ್ರ ಸಮಾವೇಶ ಶರಣುಮೇಳ 2023 ಜನವರಿ 12ರಿಂದ14ರ ವರೆಗೆ ಜರುಗಲಿದೆ.


ಈ ಕಾರ್ಯಕ್ರಮದ ಪ್ರಯುಕ್ತ ಶರಣು ಮೇಳ ಸಮಿತಿಯ ಕಾರ್ಯದ್ಯಕ್ಷಿ ಪರಮಪೂಜ್ಯ ಶ್ರೀಮನ್ನಿರಂಜನ್ ಮಹಾಜಗದ್ಗುರು ಡಾ. ಮಾತೇ ಗಂಗಾದೇವಿಯವರು, ಮಾತೆ ಬಸವರತ್ನ ಮಾತಾಜಿ (ಸುಕ್ಷೇತ್ರ ಕೂಡಲಸಂಗಮ ಶರಣುಮೇಳ ಸಮಿತಿ ತಂಡ) ಪ್ರತಿ ಹಳ್ಳಿ ಹಳ್ಳಿಗೆ ತೆರಳಿ ಧರ್ಮ ಪ್ರಚಾರ ಹಾಗೂ ಬಸವೇಶ್ವರ ವೃತ್ತದ ಬಳಿ ಷಠಸ್ಥಲ ಧ್ವಜಾರೋಹಣ ನೆರವೇರಿಸಿ ಜಾಹೀರಾತು ನೀಡಿ ಶರಣುಮೇಳಕ್ಕೆ ಆಹ್ವಾನ ನೀಡುತ್ತಿದ್ದಾರೆ.

ಪ್ರಚಾರದ ಅಂಗವಾಗಿ ಇಂದು ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಪ್ರಚಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಾಂವಶಿ ಗ್ರಾಮದ ತಾಯಂದಿರು ಶರಣು ಬಂದುಗಳು ಬರುವಂತೆ ಆಮಂತ್ರಣ ನೀಡಿದರು.
ಡಾ. ಮಾತೆ ಗಂಗಾದೇವಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಂವಶಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಕರು ಊರಿನ ಶರಣು ಬಂದುಗಳು ತಾಯಂದಿರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು