1:16 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೈ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲೇ ಬಿಗ್ ಫೈಟ್!; ಹಳೆ ಮುಖವೋ? ಹೊಸ ಮುಖವೋ?

21/12/2022, 08:29

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಇದರ ಪ್ರಭಾವ ಕರಾವಳಿ ಜಿಲ್ಲೆಯ ಮೇಲೂ ಬೀಳಲಾರಂಭಿದೆ. ಟಿಕೆಟ್ ಗಾಗಿ ಗುದ್ದಾಟ, ಪರದಾಟ ಆರಂಭವಾಗಿದೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ವಾರ್ ಜೋರಾಗಿಯೇ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.

ಮಂಗಳೂರು ಉತ್ತರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಉದ್ಯಮಿ ಇನಾಯತ್ ಆಲಿ ನಡುವೆ ಟಿಕೆಟ್ ಗಾಗಿ ಭಾರಿ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರೂ ಕೂಡ ಒಂದು ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿಯೇ ಬಿಟ್ಟಿದ್ದಾರೆ. ಇನಾಯತ್ ಆಲಿ ಅವರು ಒಂದು ವರ್ಷದ ಮುಂಚೆಯೇ ಚುನಾವಣೆಗೆ ಮಾನಸಿಕವಾಗಿ ಸಿದ್ದರಾಗಿದ್ದರು.

ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ 2 ಲಕ್ಷ ಡೆಪೊಸಿಟ್ ಇಟ್ಟು ಅರ್ಜಿ ಹಾಕುವ ಸಂಸ್ಕೃತಿಯನ್ನು ಪರಿಚಯಿಸಿರುವುದರಿಂದ ಮೊಯ್ದೀನ್ ಬಾವಾ ಹಾಗೂ ಇನಾಯತ್ ಆಲಿ ಇಬ್ಬರೂ ಅರ್ಜಿ ಹಾಕಿ ಟಿಕೆಟ್ ಗಾಗಿ ಚಾತಕಪಕ್ಷಿ ತರಹ ಕಾಯುತ್ತಿದ್ದಾರೆ. ಟಿಕೆಟ್ ಯಾರಿಗೂ ಸಿಕ್ಕಿದರೂ ಇನ್ನೊಂದು ಕಡೆಯವರು ಬಂಡಾಯ ಏಳುವಂತಹ ಸ್ಥಿತಿ ಇದೆ ಎಂದರೂ ತಪ್ಪಾಗಲಾರದು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಇದೆ ಎನ್ನಲಾಗಿದೆ. ಅದೇ ರೀತಿ ಇನಾಯತ್ ಆಲಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶೀರ್ವಾದ ಇದೆ ಎನ್ನಲಾಗಿದೆ. ಮೊಯ್ದೀನ್ ಬಾವಾ ಅವರಿಗೆ ಮತ್ತೊಂದು ಚಾನ್ಸ್ ನೀಡಿ ಮಂಗಳೂರು ಉತ್ತರದಲ್ಲಿ ಮುಸ್ಲಿಂ ನಾಯಕತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಸಿದ್ದರಾಮಯ್ಯ ಅವರ ಉದ್ದೇಶ ಎಂದು ಸಿದ್ದು ನಿಕಟವರ್ತಿಗಳು ಹೇಳುತ್ತಾರೆ‌. ಹಾಗೆ ಓಷನ್ ಕನ್ ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕ ಇನಾಯತ್ ಅಲಿ ಅವರಿಗೆ ಅವಕಾಶ ನೀಡಿ ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಬಯಕೆ ಎನ್ನಲಾಗಿದೆ. ಯಾವುದಕ್ಕೂ ಸ್ವಲ್ಪ ಸಮಯ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು