5:27 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೈ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲೇ ಬಿಗ್ ಫೈಟ್!; ಹಳೆ ಮುಖವೋ? ಹೊಸ ಮುಖವೋ?

21/12/2022, 08:29

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಏರಲಾರಂಭಿಸಿದೆ. ಇದರ ಪ್ರಭಾವ ಕರಾವಳಿ ಜಿಲ್ಲೆಯ ಮೇಲೂ ಬೀಳಲಾರಂಭಿದೆ. ಟಿಕೆಟ್ ಗಾಗಿ ಗುದ್ದಾಟ, ಪರದಾಟ ಆರಂಭವಾಗಿದೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಟಿಕೆಟ್ ವಾರ್ ಜೋರಾಗಿಯೇ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.

ಮಂಗಳೂರು ಉತ್ತರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಉದ್ಯಮಿ ಇನಾಯತ್ ಆಲಿ ನಡುವೆ ಟಿಕೆಟ್ ಗಾಗಿ ಭಾರಿ ಸ್ಪರ್ಧೆ ಏರ್ಪಟ್ಟಿದೆ. ಇಬ್ಬರೂ ಕೂಡ ಒಂದು ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿಯೇ ಬಿಟ್ಟಿದ್ದಾರೆ. ಇನಾಯತ್ ಆಲಿ ಅವರು ಒಂದು ವರ್ಷದ ಮುಂಚೆಯೇ ಚುನಾವಣೆಗೆ ಮಾನಸಿಕವಾಗಿ ಸಿದ್ದರಾಗಿದ್ದರು.

ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ 2 ಲಕ್ಷ ಡೆಪೊಸಿಟ್ ಇಟ್ಟು ಅರ್ಜಿ ಹಾಕುವ ಸಂಸ್ಕೃತಿಯನ್ನು ಪರಿಚಯಿಸಿರುವುದರಿಂದ ಮೊಯ್ದೀನ್ ಬಾವಾ ಹಾಗೂ ಇನಾಯತ್ ಆಲಿ ಇಬ್ಬರೂ ಅರ್ಜಿ ಹಾಕಿ ಟಿಕೆಟ್ ಗಾಗಿ ಚಾತಕಪಕ್ಷಿ ತರಹ ಕಾಯುತ್ತಿದ್ದಾರೆ. ಟಿಕೆಟ್ ಯಾರಿಗೂ ಸಿಕ್ಕಿದರೂ ಇನ್ನೊಂದು ಕಡೆಯವರು ಬಂಡಾಯ ಏಳುವಂತಹ ಸ್ಥಿತಿ ಇದೆ ಎಂದರೂ ತಪ್ಪಾಗಲಾರದು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಇದೆ ಎನ್ನಲಾಗಿದೆ. ಅದೇ ರೀತಿ ಇನಾಯತ್ ಆಲಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶೀರ್ವಾದ ಇದೆ ಎನ್ನಲಾಗಿದೆ. ಮೊಯ್ದೀನ್ ಬಾವಾ ಅವರಿಗೆ ಮತ್ತೊಂದು ಚಾನ್ಸ್ ನೀಡಿ ಮಂಗಳೂರು ಉತ್ತರದಲ್ಲಿ ಮುಸ್ಲಿಂ ನಾಯಕತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಸಿದ್ದರಾಮಯ್ಯ ಅವರ ಉದ್ದೇಶ ಎಂದು ಸಿದ್ದು ನಿಕಟವರ್ತಿಗಳು ಹೇಳುತ್ತಾರೆ‌. ಹಾಗೆ ಓಷನ್ ಕನ್ ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕ ಇನಾಯತ್ ಅಲಿ ಅವರಿಗೆ ಅವಕಾಶ ನೀಡಿ ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ಡಿ.ಕೆ. ಶಿವಕುಮಾರ್ ಅವರ ಬಯಕೆ ಎನ್ನಲಾಗಿದೆ. ಯಾವುದಕ್ಕೂ ಸ್ವಲ್ಪ ಸಮಯ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು