9:12 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ

21/12/2022, 20:12

ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25 ನೇ ಆದಿತ್ಯವಾರದಂದು ಮಂಗಳೂರಿನ ಕೆ.ಪಿ.ಟಿ. ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ.

ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನ್ವಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ , ರಾಜ್ಯ ಮಟ್ಟದ ಕರಾಟೆ ಪಟು ಅನಘ ಭಂಡಾರಿ ಪ್ರತಿಜ್ಞಾ ಸ್ವೀಕರಿಸಿ , ಸಂಘದ ಅಧ್ಯಕ್ಷೆ ಬಬಿತಾ ಲತೀಶ್ ಅಧ್ಯಕ್ಷತೆ ವಹಿಸಿಲಿದ್ದಾರೆ , ಭಂಡಾರಿ ಯುವ ವೇದಿಕೆಯ ಮಾಜಿ ಅಧ್ಯಕ್ಷ ಕೃಷ್ಣಾನಂದ ಭಂಡಾರಿ ಧ್ವಜಾರೋಹಣ ಮಾಡಿ , ಎ.ಜೆ.ಆಸ್ಪತ್ರೆ ಮಂಗಳೂರು ಐ.ಎಂ.ಎಸ್.ತುರ್ತು ಚಿಕಿತ್ಸಾ ವಿಭಾಗದ ಮೇಲ್ವಿಚಾರಕಿ ಲೀಲಾವತಿ ಭಾಸ್ಕರ್ ಭಂಡಾರಿ ಕೋಡಿಕಲ್ ಮುಖ್ಯ ಅತಿಥಿಯಾಗಿ ಅಗಮಿಸಲಿದ್ದಾರೆ. ಕ್ರಿಕೆಟ್, ತ್ರೋಬಾಲ್, ವಾಲಿಬಾಲ್ ,
ಹಗ್ಗಜಗ್ಗಾಟ,ಆಟೋಟ ಸ್ವರ್ಧೆಗಳು ಮಡಕೆ ಒಡೆಯುವುದು ಇನ್ನಿತರ ಸ್ವರ್ಧೆಗಳು ಹಾಗೂ ಭಂಡಾರಿ ಸಮಾಜದ ವಧು – ವರರ ನೊಂದಾವಣೆ ನಡೆಯಲಿದೆ.

ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭ ಬಹುಮಾನ ವಿತರಣೆಯ ಮುಖ್ಯ ಅತಿಥಿಗಳಾಗಿ ಭಂಡಾರಿ ಮಹಾಮಂಡಳದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ,ಬೆಂಗಳೂರು ಡಿಜಿಎಸ್ . ಜಿಐಎಮ್ಎಸ್.ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ॥ ರೋಹನ್ ಪಿ.ಜೆ.ಭಂಡಾರಿ , ಉಡುಪಿ ಪ್ರೊಬೆಷನರಿ ಸಬ್ಇನ್ಸ್ ಪೆಕ್ಟರ್ ನಿಧಿ ಬಿ.ಎನ್., ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ್ ಭಂಡಾರಿ ಹಿರೇಬೆಟ್ಟು , ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ಉಜಿರೆ , ರಾಷ್ಟ್ರ ಮಟ್ಟದ ದೇಹದಾರ್ಡ್ಯ ಪಟು ಯಶಸ್ವಿನಿ ವಿ.ಭಂಡಾರಿ , ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ರಮಾನಾಥ ಭಂಡಾರಿ ಮತ್ತು ಮಂಗಳೂರು ಭಂಡಾರಿ ಯುವ ವೇದಿಕೆಯ ಅಧ್ಯಕ್ಷ ನಿತ್ಯಾನಂದ ಭಂಡಾರಿ ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು