6:41 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ

21/12/2022, 19:46

ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25ರಂದು ನಗರದ ಕೆಪಿಟಿ ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ.

ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ರಾಜ್ಯಮಟ್ಟದ ಕರಾಟೆ ಪಟು ಅನಘ ಭಂಡಾರಿ ಪ್ರತಿಜ್ಞಾ ಸ್ವೀಕರಿಸಿ , ಸಂಘದ ಅಧ್ಯಕ್ಷೆ ಬಬಿತಾ ಲತೀಶ್ ಅಧ್ಯಕ್ಷತೆ ವಹಿಸಿಲಿದ್ದಾರೆ. ಭಂಡಾರಿ ಯುವ ವೇದಿಕೆಯ ಮಾಜಿ ಅಧ್ಯಕ್ಷ ಕೃಷ್ಣಾನಂದ ಭಂಡಾರಿ ಧ್ವಜಾರೋಹಣ ಮಾಡಿ , ಎ.ಜೆ.ಆಸ್ಪತ್ರೆ ಮಂಗಳೂರು ಐ.ಎಂ.ಎಸ್.ತುರ್ತು ಚಿಕಿತ್ಸಾ ವಿಭಾಗದ ಮೇಲ್ವಿಚಾರಕಿ ಲೀಲಾವತಿ ಭಾಸ್ಕರ್ ಭಂಡಾರಿ ಕೋಡಿಕಲ್ ಮುಖ್ಯ ಅತಿಥಿಯಾಗಿ ಅಗಮಿಸಲಿದ್ದಾರೆ. ಕ್ರಿಕೆಟ್, ತ್ರೋಬಾಲ್, ವಾಲಿಬಾಲ್ ,
ಹಗ್ಗಜಗ್ಗಾಟ,ಆಟೋಟ ಸ್ವರ್ಧೆಗಳು ಮಡಕೆ ಒಡೆಯುವುದು ಇನ್ನಿತರ ಸ್ವರ್ಧೆಗಳು ಹಾಗೂ ಭಂಡಾರಿ ಸಮಾಜದ ವಧು – ವರರ ನೊಂದಾವಣೆ ನಡೆಯಲಿದೆ.

ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭ ಬಹುಮಾನ ವಿತರಣೆಯ ಮುಖ್ಯ ಅತಿಥಿಗಳಾಗಿ ಭಂಡಾರಿ ಮಹಾಮಂಡಳದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ , ಬೆಂಗಳೂರು ಡಿಜಿಎಸ್ . ಜಿಐಎಮ್ಎಸ್.ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ.ರೋಹನ್ ಪಿ.ಜೆ.ಭಂಡಾರಿ , ಉಡುಪಿ ಪ್ರೊಬೆಷನರಿ ಸಬ್ ಇನ್ಸ್ ಪೆಕ್ಟರ್ ನಿಧಿ ಬಿ.ಎನ್., ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಮಂಗಳೂರು ಗುರುಪ್ರಸಾದ್ ಭಂಡಾರಿ ಹಿರೇಬೆಟ್ಟು , ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ಉಜಿರೆ , ರಾಷ್ಟ್ರ ಮಟ್ಟದ ದೇಹದಾರ್ಡ್ಯ ಪಟು ಯಶಸ್ವಿನಿ ವಿ.ಭಂಡಾರಿ , ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ರಮಾನಾಥ ಭಂಡಾರಿ ಮತ್ತು ಮಂಗಳೂರು ಭಂಡಾರಿ ಯುವ ವೇದಿಕೆಯ ಅಧ್ಯಕ್ಷ ನಿತ್ಯಾನಂದ ಭಂಡಾರಿ ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು