7:42 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕುಕ್ಕರ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ಸರ್ವ ರೀತಿಯಲ್ಲೂ ಸಹಕಾರ: ಶಾಸಕ ವೇದವ್ಯಾಸ ಕಾಮತ್

22/12/2022, 12:35

ಮಂಗಳೂರು(reporterkarnataka.com): ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿ ಅವರಿಗೆ ಸರ್ವ ರೀತಿಯಲ್ಲೂ ಸಹಕಾರ ನೀಡುತಿದ್ದು, ಭಯೋತ್ಪಾದನಾ ಚಟುವಟಿಕೆಗಳಂತಹ ಹೀನ ಕೃತ್ಯಗಳಲ್ಲಿ ರಾಜಕೀಯ ಬೇಳೆ ಬೇಯಿಸುವುದು ಸರಿಯಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ನಗರದ ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಕುಟುಂಬದ ಜೊತೆ ಸಂಪರ್ಕದಲ್ಲಿದ್ದೇನೆ. ಈಗಾಗಲೇ ಬಿಜೆಪಿ ಮಂಡಲದ ಪ್ರಮುಖರು ಆಸ್ಪತ್ರೆಯಲ್ಲಿರುವ ಪುರುಷೋತ್ತಮ ಪೂಜಾರಿ ಅವರನ್ನು ಭೇಟಿ ಮಾಡಿದ್ದು, ಅವರ ಮೂಲಕ ವೈಯಕ್ತಿಕ ನೆಲೆಯಲ್ಲಿ ಧನ ಸಹಾಯವನ್ನು ನೀಡಲಾಗಿದೆ. ನಮ್ಮ ಕಾರ್ಯಕರ್ತರು ಕುಟುಂಬದ ಸದಸ್ಯರ ಜೊತೆಗಿದ್ದು ಅವಶ್ಯಕತೆಗಳಿಗೆ ಸ್ಪಂದಿಸುತಿದ್ದಾರೆ ಎಂದರು‌.

ಪರಿಹಾರ ಧನ ಒದಗಿಸುವ ಕುರಿತು ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ನಿಯಮಗಳಂತೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪರಿಹಾರ ಧನ ಬಿಡುಗಡೆಯಾಗಲಿದೆ. ಪುರುಷೋತ್ತಮ ಪೂಜಾರಿ ಅವರಿಗೆ ಜೀವನೋಪಾಯಕ್ಕಾಗಿ ಆಟೋ ರಿಕ್ಷಾ ಕೊಡಿಸಲು ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು. ಹಿಂದಿನ ಪರ್ಮಿಟ್ ನಲ್ಲಿ ಹೊಸದಾಗಿ ಆಟೋ ರಿಕ್ಷಾ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಜಗದೀಶ್ ಶೇಣವ, ಕಾರ್ಪೋರೇಟರ್ ಸಂದೀಪ್ ಗರೋಡಿ, ಸುರೇಂದ್ರ ಜಪ್ಪಿನಮೊಗರು,ಕಿರಣ್ ರೈ ಮುಂತಾದವರು ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿ ಪುರುಷೋತ್ತಮ ಪೂಜಾರಿ ಅವರನ್ನು ಹಾಗೂ ವೈದ್ಯರನ್ನು ಭೇಟಿ ಮಾಡಿ ಮಾಹಿತಿ ಪಡೆದು ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು