3:48 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಎತ್ತಿನಹೊಳೆ ವಿರುದ್ದ ಪ್ರತಿಭಟನೆ ನಡೆಸಿದ್ದ ನಳಿನ್ ಇಂದು ನಾವೇ ಮಾಡಿದ್ದು ಎನ್ನುತ್ತಿದ್ದಾರೆ: ಮಾಜಿ ಸಚಿವ ರೈ ಲೇವಡಿ

22/12/2022, 17:07

ಮಂಗಳೂರು(reporterkarnataka.com): ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಅದರ ವಿರುದ್ಧ ಪಾದಯಾತ್ರೆ, ಪ್ರತಿಭಟನೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇದೀಗ ಹಾಸನ, ಕೋಲಾರ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಲೇವಡಿ ಮಾಡಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ವಿಚಾರದಲ್ಲಿಯೂ ನಾನು ಎಂದೂ ಹಿಪಾಕ್ರಸಿ ಪಾಲಿಟಿಕ್ಸ್ ಮಾಡಿಲ್ಲ. ಎತ್ತಿನಹೊಳೆ ಯೋಜನೆಯಿಂದ ಜಿಲ್ಲೆಯ ಜನರಿಗೆ ತೊಂದರೆ ಆದರೆ ಪಶ್ಚಿಮ ವಾಹಿನಿ ಯೋಜನೆಗಾಗಿ ಸುಮಾರು 60 ಮಂದಿಯ ರೈತರ ನಿಯೋಗವನ್ನು ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರ ಬಳಿ ಕರೆದುಕೊಂಡು ಹೋಗಿದ್ದೆ. ಯೋಜನೆಗೆ
ಬಜೆಟ್‍ನಲ್ಲಿ ಹಣ ಮಂಜೂರು ಮಾಡಲಾಗಿತ್ತು. ಬಳಿಕ ಬಿಜೆಪಿ ಸರಕಾರ ಆಡಳಿತಕ್ಕೆ ಬಂತು. ಅವರು ಕಳೆದ ವರ್ಷ ಮತ್ತು ಈ ವರ್ಷ ಬಜೆಟ್‍ನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ ಎಂದು ವಿವರ ನೀಡಿದರು.
ಅಂದು ಎತ್ತಿನಹೊಳೆ ವಿರುದ್ಧ ಪಾದಯಾತ್ರೆ ಮಾಡಿ ಇಂದು ಎತ್ತಿನ ಹೊಳೆ ಯೋಜನೆಗಾಗಿ ಕರಸೇವೆ ರೀತಿ ಚಳವಳಿ ಮಾಡುವುದಾಗಿ ಹೇಳುತ್ತಿರುವುದು ಚುನಾವಣೆ ಹತ್ತಿರ ಬಂದಾಗ ಬಿಜೆಪಿಯವರು ನಡೆಸುತ್ತಿರುವ ಕುತಂತ್ರ. ಇದೀಗ
ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುತ್ತಿದೆ. ಅದು ಬೇಡ. ಅದರ ಬದಲಿಗೆ
ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ರಮಾನಾಥ ರೈ ಒತ್ತಾಯಿಸಿದರು.
ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಆಕ್ಷೇಪವನ್ನು ಕೇಂದ್ರಕ್ಕೆ ರಾಜ್ಯ ಸರಕಾರ ಕಳುಹಿಸಿದೆ. ಅದನ್ನು ಜಾರಿಗೊಳಿಸುವ ಪ್ರಯತ್ನ ಮಾಡಲಿ ಎಂದು ಅವರು ತಾಕೀತು ಮಾಡಿದರು.
ಇಂದು ಬಿಜೆಪಿಯ ಡಬ್ಬಲ್ ಇಂಜಿನ್ ಸರಕಾರ ಇರುವಾಗ ಅದನ್ನು ರದ್ದುಪಡಿಸಲು ಕ್ರಮ ವಹಿಸುವುದು ಬಿಟ್ಟು ವಿರೋಧ ಎಂದು ಹೇಳುವುದು ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವರು ನುಡಿದರು.
ಕಸ್ತೂರಿ ರಂಗನ್ ವರದಿ ಕೂಡಾ ಇನ್ನೂ ಕರಡು ಅಧಿಸೂಚನೆಯ ಹಂತದಲ್ಲಿದ್ದು, ಇದು ಜೀವಂತವಾಗಿದ್ದು, ಎಂದಿಗೂ ತೂಗುಗತ್ತಿಯಾಗಿದೆ. ಬಿಜೆಪಿ ತನ್ನ ಹಿಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಕಸ್ತೂರಿ ರಂಗನ್ ವರದಿ ರದ್ದುಪಡಿಸುವುದಾಗಿ ಹೇಳಿಕೊಂಡಿತ್ತು. ಆದರೆ ಐದು ವರ್ಷವಾದರೂ ಆಗಿಲ್ಲ ಎಂದು ರೈ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಲೆಟ್ ಪಿಂಟೋ, ಶಾಹುಲ್ ಹಮೀದ್, ಅಪ್ಪಿ, ಗಣೇಶ್ ಪೂಜಾರಿ, ಉಮೇಶ್ ದಂಡಕೇರಿ, ಜಯಶೀಲ ಅಡ್ಯಂತಾಯ, ಬಿ.ಎಲ್. ಪದ್ಮನಾಭ, ಶಬೀರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು