3:49 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅನಾಥ ಅಂಧ ಅಜ್ಜಿಗೆ ಆಶ್ರಯ: ಅನಾಥಾಶ್ರಮ ಸೇರಿಸಿದ ಕರವೇ ಫ್ರಾನ್ಸಿಸ್ ಡಿಸೋಜ

22/12/2022, 21:33

ಮಡಿಕೇರಿ(reporterkarnataka.com): ಕರ್ನಾಟಕ ರಕ್ಷಣಾ ವೇದಿಕೆಯ ಫ್ರಾನ್ಸಿಸ್ ಡಿಸೋಜ ಅವರು ಸೋಮವಾರಪೇಟೆಯ ಹಾನಗಲ್ ಗ್ರಾಮದಲ್ಲಿ ಇದ್ದ ಅಂಧ ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಫ್ರಾನ್ಸಿಸ್ ಡಿಸೋಜ ಅವರು ಮರ್ವಿನ್ ಡಿಸೋಜ ಹಾಗೂ ಮನೋಜ್ ಭಟ್ ಅವರಿಗೆ ನೆರವಿನಿಂದ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿದ್ದಾರೆ. ಆಟೋ ರಾಜ ಸಂಸ್ಥೆಗೆ ಕರವೇ ಕಾರ್ಯಕರ್ತರು ಹೃದಯಪೂರ್ವಕ ಧನ್ಯವಾದಗಳು ಅರ್ಪಿಸಿದ್ದಾರೆ.

ಕರವೇ ಫ್ರಾನ್ಸಿಸ್ ಡಿಸೋಜ ರವರ ಮಾತು ನಾವು ದೇವರನ್ನು ಕಂಡಿಲ್ಲ. ಇಂಥ ಅನಾಥರ ಕೆಲಸ ಮಾಡಿ ನಾವು ದೇವರನ್ನು ಕಾಣುತ್ತಿದ್ದೇವೆ. ಹಾಗಾಗಿ ಇಂಥ ಕೆಲಸಗಳನ್ನು ನಾನು ಮುಂದೆಯೂ ಸಹ ಮಾಡುತ್ತಲೇ ಇರುತ್ತೇನೆ ಎಂದು ಫ್ರಾನ್ಸಿಸ್ ನುಡಿದರು.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಗೆ ಸೇರಿದ ಹಾನಗಲ್ ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಕಣ್ಣು ಕಾಣದ 75 ವರ್ಷದ ಕಣ್ಣು ಕಾಣದ ಅಜ್ಜಿ ತಿರುಗಾಡುತ್ತಿದ್ದರು. ಅವರು ಜನರು ಕೊಡುವ ಆಹಾರವನ್ನು ಊಟ ಮಾಡುತ್ತಾ ಚಳಿ ಗಾಳಿ ಮಳೆಯಲ್ಲಿ ಸುತ್ತಾಡಿಕೊಂಡು ಒಂದು ಹಾಳು ಬಿದ್ದಿರುವ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದರು. ಇದನ್ನೆಲ್ಲ ಗಮನಿಸಿದ ಹಾನಗಲ್ ಗ್ರಾಮಸ್ಥರು ಮಾರ್ವಿನ್ ಡಿಸೋಜ ಅವರಿಗೆ ತಿಳಿಸಿದ್ದರು.


ಹಾಗಾಗಿ ಮಾರ್ವಿನ್ ಡಿಸೋಜರವರು ಕರವೇ ಕಾರ್ಯಕರ್ತರಿಗೆ ತಿಳಿಸಿದ ಮೇರೆಗೆ ಅಜ್ಜಿಯನ್ನು ಕರೆದುಕೊಂಡು ಬಂದು ಮಾರ್ವೀನ್ ಡಿಸೋಜರವರ ಮನೆಯಲ್ಲಿ ಸಂಪೂರ್ಣವಾಗಿ ಸ್ನಾನ ಮಾಡಿಸಿ ಸಂಪೂರ್ಣವಾಗಿ ಸ್ವಚ್ಛಪಡಿಸಿ ಕೈಯಲ್ಲಿದ್ದ ಉಗುರುಗಳನ್ನು ಮತ್ತು ಕಾಲಲ್ಲಿದ್ದ ಉಗುರುಗಳನ್ನು ತೆಗೆದು ಹಾಗೂ ಕೂದಲನ್ನು ಕಟ್ ಮಾಡಿ ಹೊಸ ಬಟ್ಟೆಗಳನ್ನು ತೊಡಸಿ ಈ ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಲು ಖುದ್ದಾಗಿ ಕಾರಿನಲ್ಲಿ ಹೋಗಿ ಸೇರಿಸಿ ಮಾನವೀಯತೆ ಮೆರೆದಿದ್ದೇವೆ. ಅಜ್ಜಿಯನ್ನು ಸಾಗಿಸಲು ಮರ್ವಿನ್ ಕಾರಿನ ವ್ಯವಸ್ಥೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು