1:51 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಕಡಿಮೆ ವೆಚ್ಚದಲ್ಲಿ ಆಧುನಿಕ ಆರೋಗ್ಯ ಸೌಲಭ್ಯ: ಡಾ.ಎಂ.ಎಂ. ಶೇಖರ್

23/12/2022, 19:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info. reporterkarnataka@gmail.com

ಗ್ರಾಮಾಂತರ ಪ್ರದೇಶದಲ್ಲಿ ಬಡ ಜನರ ಆಶಾಕಿರಣವಾಗಿರುವ ಶ್ರೀ ಆದಿಚುಂಚನಗಿರಿ ಸೂಪರ್ ಹಾಸ್ಪಿಟಲ್ ನಲ್ಲಿ ವಿವಿಧ ಸೌಲಭ್ಯಗಳು ದೊರೆಯಲಿವೆ ಎಂದು ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಡಾ. ಎಂ. ಎಂ. ಶೇಖರ್ ಹೇಳಿದರು.

ಅವರು ನಾಗಮಂಗಲ ತಾಲೂಕು ಬಿಜಿ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಶ್ರೀ ಆದಿಚುಂಚನಗಿರಿ ಸೂಪರ್ ಸ್ಪೆಶಾಲಿಟಿ ಹಾಸ್ಪಿಟಲ್ ಮೇಲ್ದರ್ಜೆಗೆಯಾಗಿದ್ದು ಈ ಆಸ್ಪತ್ರೆಯಲ್ಲಿನ ವಿವಿಧ ವಿಭಾಗಗಳಲ್ಲಿ ಬಡಜನರು ನಗರಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಕಡಿಮೆ ವೆಚ್ಚದಲ್ಲಿ ಅನುಕೂಲವಾಗುವ ತಪಾಸಣಾ ಸೇವೆಗಳು ಲಭ್ಯವಿದ್ದು, ಶ್ರೀಗಳ ಬಹುದಿನದ ಕನಸು ನನಸಾಗಿರುವುದು ನಿಜಕ್ಕೂ ಸಂತೋಷವಾಗಿದೆ ಎಂದು ಹೇಳಿದರು.

ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಸದುಪಯೋಗಪಡಿಸಿ ಪಡೆಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಡಾ. ಸಿ. ಕೆ. ಸುಬ್ಬ (ಕುಲ ಸಚಿವರು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ) ಡಾ. ಎಂ. ಜೆ. ಶಿವರಾಂ (ಪ್ರಾಚಾರ್ಯರು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ) ಡಾ. ಕೆ. ಎಂ. ಶಿವಕುಮಾರ್ (ಮುಖ್ಯಸ್ಥರು ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ) ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿನ ವಿವಿಧ ವಿಭಾಗದ ಆರೋಗ್ಯ ತಪಾಸಣಾ ಕೇಂದ್ರಗಳ ಬಗ್ಗೆ ವಿವರವಾದ ಮಾಹಿತಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು