9:31 AM Wednesday10 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಫೆಬ್ರವರಿ ತಿಂಗಳಿನಲ್ಲೇ ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಬೊಮ್ಮಾಯಿ

24/12/2022, 18:42

ಹಾವೇರಿ(reporterkarnataka.com): ಫೆಬ್ರುವರಿ ತಿಂಗಳಿನಲ್ಲಿಯೇ ಬಜೆಟ್ ಮಂಡನೆಯಾಗಲಿದ್ದು, ಈ ಸಂಬಂಧ ಹಣಕಾಸು ಇಲಾಖೆಯ ಜತೆಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ– ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಶಿಗ್ಗಾಂವಿಯಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ ತಿಂಗಳಿನಿಂದ ಬಜೆಟ್ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದರು.

ಕೋವಿಡ್ ಗೆ ಕ್ರಮ: ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಕುರಿತು ಮಾಹಿತಿ ನೀಡಿದ ಅವರು,ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್,ಬೆಡ್ ಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು. ಮಾಸ್ಕ್ ಗಳನ್ನು ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋವಿಡ್ ನಿಂದ ತೊಡಕು ಉಂಟಾಗುವುದೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ತೊಂದರೆ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು