12:05 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಭಕ್ತಿ- ಸಡಗರದಿಂದ ಮೇಳೈಸಿದ ಕೊಕಟನೂರ ಯಲ್ಲಮ್ಮದೇವಿ ಜಾತ್ರೆ: ಅಮ್ಮನಿಗೆ ಬಳೆ ತೊಡಿಸಿದ ಮುತ್ತೈದೆಯರು

24/12/2022, 23:23

ರಾಹುಲ್ ಅಥಣಿ ಬೆಳಗಾವಿgg

info.reporterkarnataka@gmail.ಕಾಂ

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಎಳ್ಳ ಅಮವಾಸ್ಯೆ ದಿನದಂದು ಸಂಭ್ರಮ -ಸಡಗರದಿಂದ ನಡೆಯಿತು. ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪುನೀತರಾದರು.
ಆಚಾರ್ಯ ಪ್ರದೀಪ ಜೋಶಿ ನೇತೃತ್ವದಲ್ಲಿ ಅಗ್ನಿ ಕುಂಡಕ್ಕೆ ವಿಶೇಷ ಪೂಜೆ, ಅಭಿಷೇಕ, ಹೋಮ-ಹವನ ವಿಧಿ ವಿಧಾನ ಪೂರ್ವಕವಾಗಿ ನೆರವೇರಿಸಲಾಯಿತು.ದೇವಿ ದರ್ಶನ ಪಡೆದ ಭಕ್ತರು ಪಂಚ ಪದಾರ್ಥಗಳಾದ ಉಡಿ ತುಂಬಿ, ಗಜ್ಜರಿ, ತಪ್ಪಲ ಈರುಳ್ಳಿ, ಬದನೆಕಾಯಿ, ಮೆಂತೆ, ಬಾಳಿಕಾಯಿ ಸೇರಿದಂತೆ ಕಡಬು, ಹೋಳಿಗೆಯನ್ನು ಹಡಲಗಿ ಬುಟ್ಟಿಯಲ್ಲಿಟ್ಟು ಕುಂಕುಮ ಅರಿಶಿಣ ಹಚ್ಚಿ ಭಕ್ತಿ-ಭಾವದಿಂದ ನೈವೇದ್ಯ ಅರ್ಪಿಸಿದರು.


ಮುತ್ತೈದೆತನ ಗಟ್ಟಿಯಾಗಲೆಂದು ದೇವಸ್ಥಾನದಲ್ಲಿ ಬಳೆ ಉಡಿಸಲಾಯಿತು. ಮದುವೆ ಮಾಡಿ ಕೊಟ್ಟ ಹೆಣ್ಣು ಮಕ್ಕಳನ್ನು ತವರು ಮನೆಗೆ ಕರೆಯಿಸಿ ಅವರಿಗೆ ಉಡಿ ತುಂಬಿ ಕಳುಹಿಸಲಾಯಿತು. ಜಾತ್ರಾ ಕಮಿಟಿ ಅಧ್ಯಕ್ಷ ಬಾಬುಗೌಡ ಬುಲಗೌಡ ಮಾತನಾಡಿ, 2 ವರ್ಷದಿಂದ ಕರೋನಾ ಹಿನ್ನೆಲೆಯಲ್ಲಿ ಜಾತ್ರೆ ಸಂಭ್ರಮದಿಂದ ಮಾಡಲು ಸಾಧ್ಯವಾಗಿರಲಿಲ್ಲ. ಕಾರಣ, ಈ ಬಾರಿ ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಜಾತ್ರೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಎಲ್ಲ ರೀತಿ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು