5:53 PM Monday16 - February 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ

ಇತ್ತೀಚಿನ ಸುದ್ದಿ

ಬಿಜೆಪಿ ಸಖ್ಯಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡ್ ಬೈ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ

25/12/2022, 14:17

ಬೆಂಗಳೂರು(reporterkarnataka.com): ಮಾಜಿ ಸಚಿವ, ಗಣಿ ದೊರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಎಂಬ ಹೊಸ ಪಕ್ಷವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ಹಲವು ತಿಂಗಳಿನಿಂದ ಬಿಜೆಪಿ ಒಡನಾಟದಿಂದ ಬಹಳ ದೂರವೇ ಉಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿ ತ್ಯಜಿಸುತ್ತಾರೆ ಎಂದು ಈ ಹಿಂದೆಯೇ ರಾಜಕೀಯ ವೀಕ್ಷಕರು ಲೆಕ್ಕಾಚಾರ ಹಾಕಿದ್ದರು. ಹಾಗಾಗಿ ಇದು ಬಿಜೆಪಿ ಪಾಲಿಗೆ ಅಚ್ಚರಿಯ ವಿಷಯವಾಗಿ ಉಳಿದಿರಲಿಲ್ಲ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ
ಅವರು, ಬಿಜೆಪಿಗಾಗಿ ಸಾಕಷ್ಟು ದುಡಿಮೇ ಮಾಡಿದ್ದೇನೆ. ಕಷ್ಟದ ದಿನಗಳಲ್ಲಿ ನನ್ನ ಬೆಂಬಲಕ್ಕೆ ಯಾರೂ ಕೂಡ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್– ಬಿಜೆಪಿ ಸಮಿಶ್ರ ಸರ್ಕಾರ ತರುವುದರಲ್ಲಿ ನನ್ನದೇ ಹೆಚ್ಚು ಪಾತ್ರ ಇತ್ತು. ಆದರೆ ಜೈಲಿಗೆ ಹೋದಾಗ ಯಾರೂ ಕೂಡ ನನ್ನ ಬೆಂಬಲಕ್ಕೆ ಬಾರದೇ ಇರುವುದು ತೀವ್ರ ನೋವು ತಂದಿದೆ ಎಂದರು.

ಶ್ರೀರಾಮುಲು ನನ್ನ ಸಹೋದರ ಸಮಾನರು. ಈಗ ಬಿಜೆಪಿಯಲ್ಲಿ ಇದ್ದಾರೆ. ನಮ್ಮ ಹೊಸ ಪಕ್ಷಕ್ಕೆ ಬರುವಂತೆ ಅವರ ಮೇಲೆ ಎಂದಿಗೂ ಒತ್ತಡ ಹಾಕಲ್ಲ. ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ. ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದಾರೆ. ಅವರು ಯಾಕೇ ಹೀಗೆ ಹೇಳಿದರೂ ಎಂದು ನನಗೆ ಗೊತ್ತಿಲ್ಲ. ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ತುಂಬಾ ಘಾಸಿಯಾಯಿತು. ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಅನ್ಯಾಯವಾಗಿದೆ. ಕಷ್ಟದ ಜತೆಗೆ ನನ್ನ ಜತೆಗೆ ಇದ್ದ ಪತ್ನಿ ಲಕ್ಷ್ಮಿ ಅರುಣಾ ಹೊಸ ಪಕ್ಷ ಮುನ್ನಡೆಸುವಲ್ಲಿ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಶೀಘ್ರವೇ ಹೊಸ ಪಕ್ಷದ ಚಿಹ್ನೆ ಹಾಗೂ ಬಾವುಟವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು