10:10 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಬಿಜೆಪಿ ಸಖ್ಯಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಗುಡ್ ಬೈ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ

25/12/2022, 14:17

ಬೆಂಗಳೂರು(reporterkarnataka.com): ಮಾಜಿ ಸಚಿವ, ಗಣಿ ದೊರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ಎಂಬ ಹೊಸ ಪಕ್ಷವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ಹಲವು ತಿಂಗಳಿನಿಂದ ಬಿಜೆಪಿ ಒಡನಾಟದಿಂದ ಬಹಳ ದೂರವೇ ಉಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿ ತ್ಯಜಿಸುತ್ತಾರೆ ಎಂದು ಈ ಹಿಂದೆಯೇ ರಾಜಕೀಯ ವೀಕ್ಷಕರು ಲೆಕ್ಕಾಚಾರ ಹಾಕಿದ್ದರು. ಹಾಗಾಗಿ ಇದು ಬಿಜೆಪಿ ಪಾಲಿಗೆ ಅಚ್ಚರಿಯ ವಿಷಯವಾಗಿ ಉಳಿದಿರಲಿಲ್ಲ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ
ಅವರು, ಬಿಜೆಪಿಗಾಗಿ ಸಾಕಷ್ಟು ದುಡಿಮೇ ಮಾಡಿದ್ದೇನೆ. ಕಷ್ಟದ ದಿನಗಳಲ್ಲಿ ನನ್ನ ಬೆಂಬಲಕ್ಕೆ ಯಾರೂ ಕೂಡ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್– ಬಿಜೆಪಿ ಸಮಿಶ್ರ ಸರ್ಕಾರ ತರುವುದರಲ್ಲಿ ನನ್ನದೇ ಹೆಚ್ಚು ಪಾತ್ರ ಇತ್ತು. ಆದರೆ ಜೈಲಿಗೆ ಹೋದಾಗ ಯಾರೂ ಕೂಡ ನನ್ನ ಬೆಂಬಲಕ್ಕೆ ಬಾರದೇ ಇರುವುದು ತೀವ್ರ ನೋವು ತಂದಿದೆ ಎಂದರು.

ಶ್ರೀರಾಮುಲು ನನ್ನ ಸಹೋದರ ಸಮಾನರು. ಈಗ ಬಿಜೆಪಿಯಲ್ಲಿ ಇದ್ದಾರೆ. ನಮ್ಮ ಹೊಸ ಪಕ್ಷಕ್ಕೆ ಬರುವಂತೆ ಅವರ ಮೇಲೆ ಎಂದಿಗೂ ಒತ್ತಡ ಹಾಕಲ್ಲ. ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ. ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದಾರೆ. ಅವರು ಯಾಕೇ ಹೀಗೆ ಹೇಳಿದರೂ ಎಂದು ನನಗೆ ಗೊತ್ತಿಲ್ಲ. ಅವರ ಹೇಳಿಕೆಯಿಂದ ನನ್ನ ಮನಸ್ಸಿಗೆ ತುಂಬಾ ಘಾಸಿಯಾಯಿತು. ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಅನ್ಯಾಯವಾಗಿದೆ. ಕಷ್ಟದ ಜತೆಗೆ ನನ್ನ ಜತೆಗೆ ಇದ್ದ ಪತ್ನಿ ಲಕ್ಷ್ಮಿ ಅರುಣಾ ಹೊಸ ಪಕ್ಷ ಮುನ್ನಡೆಸುವಲ್ಲಿ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಶೀಘ್ರವೇ ಹೊಸ ಪಕ್ಷದ ಚಿಹ್ನೆ ಹಾಗೂ ಬಾವುಟವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು