2:20 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

25/12/2022, 20:57

ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದ ಅಹಿತಕರ ಘಟನೆ ದುರದೃಷ್ಟಕರ. ಇಂತಹ ಘಟನೆ ನಡೆಯಬಾರದಿತ್ತು. ಜನರು ಯಾವುದೇ ಊಹಾಪೋಹಕ್ಕೆ ಕಿವಿಗೊಡದೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮ ಜತೆ ಮಾತನಾಡಿದರು.
ಕಾಟಿಪಳ್ಳ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ‌. ಆದಷ್ಟು ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ತನಿಖೆ ನಡೆಯಲಿದೆ ಎಂದು ಅವರು ನುಡಿದರು.
ಕಾಟಿಪಳ್ಳ ಘಟನೆ ದುರದೃಷ್ಟಕರ; ಕರಾವಳಿಗರು ಶಾಂತಿ- ಸೌಹಾರ್ದತೆ ಕಾಪಾಡಿ: ಸಿಎಂ ಬೊಮ್ಮಾಯಿ

ಮೂಡುಬಿದರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲು ನಾನು ಆಗಮಿಸಿದ್ದೇನೆ. ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಕ್ಜಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸುವಲ್ಲಿ ಬಹಳ ಅಗತ್ಯ. ರಾಜ್ಯದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ಅಧಿವೇಶನ ನಡೆಯುತ್ತಿದ್ದರೂ ಪೂರ್ವ ನಿಗದಿತ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ ಎಂದು ಸಿಎಂ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು