8:33 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇಂದಿನಿಂದ ಅನ್ ಲಾಕ್ 3.0 ಜಾರಿ: ದೇಗುಲ, ಮಾಲ್ ಗೆ ಗ್ರೀನ್ ಸಿಗ್ನಲ್ ; ನೈಟ್ ಕರ್ಫ್ಯೂ ಮುಂದುವರಿಕೆ

05/07/2021, 07:16

ಬೆಂಗಳೂರು(reporterkarnataka news): ಸರಕಾರದ ಅನ್ ಲಾಕ್ 3.0 ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ಮತ್ತಷ್ಟು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಗ್ರೀನ್ ಸಿಗ್ನಲ್ ದೊರೆತಿದೆ. ಇದು ಜುಲೈ 5ರ ಬೆಳಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ.

ಹೊಸ ಮಾರ್ಗಸೂಚಿ ಪ್ರಕಾರ ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಶೇ. 100ರಷ್ಟು ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಸರಕಾರಿ ಹಾಗೂ ಖಾಸಗಿ ಬಸ್ ಗಳಲ್ಲಿ ಕೂಡ ಶೇ.100ರಷ್ಟು ಪ್ರಯಾಣಿಕರಿಗೆ ಅನುವು ಮಾಡಿ ಕೊಡಲಾಗಿದೆ. ದೇವಾಲಯ, ಮಾಲ್, ಸ್ವಿಮ್ಮಿಂಗ್ ಪೂಲ್ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ ಮಾಡಲಾಗಿದೆ.

*  ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.

* ಮಾಲ್ ಗಳನ್ನು ತೆರೆಯಲು ಗ್ರೀನ್ ಸಿಗ್ನಲ್.

* ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ.

* ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಒಪ್ಪಿಗೆ

* ಮದುವೆ ಹಾಗೂ ಇನ್ನಿತರ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ. 

* ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

* ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

* ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

* ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

* ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. * ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

* ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

* ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

* ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ. ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು