6:07 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಕಾಟಿಪಳ್ಳ ಅಂಗಡಿ ಮಾಲೀಕನ ಕೊಲೆ ಪ್ರಕರಣ: 3 ಮಂದಿ ಆರೋಪಿಗಳ ಬಂಧನ

26/12/2022, 17:31

ಸುರತ್ಕಲ್(reporter Karnataka.com): ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಬಂಧಿತ ಆರೋಪಿಗಳನ್ನು ಶೈಲೇಶ್ ಪೂಜಾರಿ ಅಲಿಯಾಸ್ ಶೈಲು (21), ಸುವಿನ್ ಕಾಂಚನ್ (25) ಮತ್ತು ಪಚ್ಚು ಅಲಿಯಾಸ್ ಪವನ್ (26) ಎಂದು ಗುರುತಿಸಲಾಗಿದೆ. ಬಂಧಿತರ ಪೈಕಿ ಶೈಲೇಶ್ ಮತ್ತು ಸುವಿನ್ ಕಾಂಚನ್ ಎಂಬವರು ಪಿಂಕಿ ನವಾಜ್ ಎಂಬಾತನ ಕೊಲೆ ಯತ್ನ ಪ್ರಕರಣದ ಆರೋಪಿಗಳು ಆಗಿದ್ದಾರೆ. 2018ರಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಪಿಂಕಿ ನವಾಜ್‌ನನ್ನು ಕೊಲೆ ಮಾಡಲು 2021ರ ಫೆ.10ರಂದು ಯತ್ನ ಮಾಡಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶೈಲೇಶ್ ಪೂಜಾರಿ ಹಲವು ವರ್ಷಗಳ ಹಿಂದೆ ನಡೆದ ರವೂಫ್ ಕೊಲೆ ಪ್ರಕರಣದ ಆರೋಪಿಯ ಪುತ್ರನಾಗಿದ್ದಾನೆ. ಸುಮಾರು ವರ್ಷಗಳ ಹಿಂದೆ ಕಾಟಿಪಳ್ಳದಲ್ಲಿ ನಡೆದಿದ್ದ ರವೂಫ್ ಹತ್ಯೆ ಪ್ರಕರಣದಲ್ಲಿ ಈಗಿನ ಆರೋಪಿ ಶೈಲೇಶ್‌ ಅವರ ತಂದೆ ಕೇಶವ ಪೂಜಾರಿ ಪ್ರಮುಖ ಆರೋಪಿಯಾಗಿದ್ದರು. ಸುರತ್ಕಲ್‌ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು