7:10 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ಪರಿಸರ ರಕ್ಷಣೆಗೆ ಕೆರೆ, ಪಾರ್ಕ್ ಅಭಿವೃದ್ಧಿಗೆ ಹಚ್ಚಿನ ಆದ್ಯತೆ: ಶಾಸಕ ಡಾ.ಭರತ್ ಶೆಟ್ಟಿ

26/12/2022, 17:39

ಸುರತ್ಕಲ್(reporterkarnataka.com): ಕೆರೆ, ಪಾರ್ಕ್ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಅವರು ಮನಪಾ ವಾರ್ಡ್ ನಂ..7ರಲ್ಲಿ 54 ಲಕ್ಷ ರೂ.ವೆಚ್ಚದಲ್ಲಿ 7 ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕಾವೂರು ಕೆರೆ ಅಭಿವೃದ್ಧಿಯಾಗುತ್ತಿದೆ. ಬಗ್ಗುಂಡಿ ಕೆರೆಯನ್ನು ಪುನರ್ ನಿರ್ಮಿಸಲು ಬೃಹತ್ ಕಂಪನಿಗಳಿಂದ ನೆರವು ಕೋರಲಾಗಿದೆ. ಕೆರೆಯ ವಿಸ್ತೀರ್ಣ ಗುರುತಿಸಲು ಡೋನ್ ಸರ್ವೆ ಮಾಡಲಾಗುತ್ತಿದೆ. ಇಲ್ಲಿಗೆ ಹರಿದು ಬರುವ ಮಾಲಿನ್ಯ ನೀರನ್ನು ತಡೆಯಲು ಸೂಕ್ತ ಪರಿಹಾರೋಪಾಯ ಮತ್ತು ಕುಡುಂಬೂರು ಸುತ್ತಮುತ್ತಲಿನ ಕಾಲುವೆಗಳ ಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಮೇಯರ್‌ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷೆ ನಯನಾ ಕೋಟ್ಯಾನ್,ಮನಪಾ ಸದಸ್ಯ ವರುಣ್ ಚೌಟ, ಬಿಜೆಪಿ ಮಂಡಲ ಉಪಾಧ್ಯಕ್ಷ ವಿಠಲ್ ಸಾಲ್ಯಾನ್‌, ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಸುನಿಲ್ ಕುಳಾಯಿ, ಯುವಮೋರ್ಚಾ ಮಂಡಲ ಅಧ್ಯಕ್ಷ ಭರತ್‌ ರಾಜ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖ್ ಸತೀಶ್ ದೇವಾಡಿಗ, ಮನೀಶ್, ಸಹ ಪ್ರಮುಖ್ ಸುರೇಶ್ ಸಾಲ್ಯಾನ್, ಬಿಜೆಪಿ ಪ್ರಮುಖರಾದ ಜಯಂತ್‌ ಸಾಲ್ಯಾನ್, ಜಯಂತ್ ಕರ್ಕೇರ ಆನಂದ ಭಂಡಾರಿ, ಬಾಲಕೃಷ್ಣ ಕೆಂಚನೂರ್, ಸ್ಥಳೀಯರಾದ ದೇವದಾಸ್, ಮಾಧವ, ಗೋಪಿನಾಥ್, ಶ್ರೀನಿವಾಸ್‌, ಲೋಕೋಪಯೋಗಿ ಇಲಾಖೆ
ಗುತ್ತಿಗೆದಾರರಾದ ಡೆನ್ನಿಸ್ ಲೋಬೋ ಮತ್ತಿತರರು ಉಪ ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು