5:26 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಪರಿಸರ ರಕ್ಷಣೆಗೆ ಕೆರೆ, ಪಾರ್ಕ್ ಅಭಿವೃದ್ಧಿಗೆ ಹಚ್ಚಿನ ಆದ್ಯತೆ: ಶಾಸಕ ಡಾ.ಭರತ್ ಶೆಟ್ಟಿ

26/12/2022, 17:39

ಸುರತ್ಕಲ್(reporterkarnataka.com): ಕೆರೆ, ಪಾರ್ಕ್ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿ ಪರಿಸರಕ್ಕೆ ಪೂರಕವಾದ ಅಭಿವೃದ್ಧಿ ಕಾರ್ಯ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಅವರು ಮನಪಾ ವಾರ್ಡ್ ನಂ..7ರಲ್ಲಿ 54 ಲಕ್ಷ ರೂ.ವೆಚ್ಚದಲ್ಲಿ 7 ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕಾವೂರು ಕೆರೆ ಅಭಿವೃದ್ಧಿಯಾಗುತ್ತಿದೆ. ಬಗ್ಗುಂಡಿ ಕೆರೆಯನ್ನು ಪುನರ್ ನಿರ್ಮಿಸಲು ಬೃಹತ್ ಕಂಪನಿಗಳಿಂದ ನೆರವು ಕೋರಲಾಗಿದೆ. ಕೆರೆಯ ವಿಸ್ತೀರ್ಣ ಗುರುತಿಸಲು ಡೋನ್ ಸರ್ವೆ ಮಾಡಲಾಗುತ್ತಿದೆ. ಇಲ್ಲಿಗೆ ಹರಿದು ಬರುವ ಮಾಲಿನ್ಯ ನೀರನ್ನು ತಡೆಯಲು ಸೂಕ್ತ ಪರಿಹಾರೋಪಾಯ ಮತ್ತು ಕುಡುಂಬೂರು ಸುತ್ತಮುತ್ತಲಿನ ಕಾಲುವೆಗಳ ಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಮೇಯರ್‌ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷೆ ನಯನಾ ಕೋಟ್ಯಾನ್,ಮನಪಾ ಸದಸ್ಯ ವರುಣ್ ಚೌಟ, ಬಿಜೆಪಿ ಮಂಡಲ ಉಪಾಧ್ಯಕ್ಷ ವಿಠಲ್ ಸಾಲ್ಯಾನ್‌, ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಸುನಿಲ್ ಕುಳಾಯಿ, ಯುವಮೋರ್ಚಾ ಮಂಡಲ ಅಧ್ಯಕ್ಷ ಭರತ್‌ ರಾಜ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖ್ ಸತೀಶ್ ದೇವಾಡಿಗ, ಮನೀಶ್, ಸಹ ಪ್ರಮುಖ್ ಸುರೇಶ್ ಸಾಲ್ಯಾನ್, ಬಿಜೆಪಿ ಪ್ರಮುಖರಾದ ಜಯಂತ್‌ ಸಾಲ್ಯಾನ್, ಜಯಂತ್ ಕರ್ಕೇರ ಆನಂದ ಭಂಡಾರಿ, ಬಾಲಕೃಷ್ಣ ಕೆಂಚನೂರ್, ಸ್ಥಳೀಯರಾದ ದೇವದಾಸ್, ಮಾಧವ, ಗೋಪಿನಾಥ್, ಶ್ರೀನಿವಾಸ್‌, ಲೋಕೋಪಯೋಗಿ ಇಲಾಖೆ
ಗುತ್ತಿಗೆದಾರರಾದ ಡೆನ್ನಿಸ್ ಲೋಬೋ ಮತ್ತಿತರರು ಉಪ ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು