3:44 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೊಣಾಜೆ ಪೊಲೀಸರ ಭಾರೀ ಕಾರ್ಯಾಚರಣೆ: 3 ಲಕ್ಷ ರೂ. ಮೌಲ್ಯದ ಗಾಂಜಾ ವಶ; 4 ಮಂದಿ ಬಂಧನ

26/12/2022, 21:54

ಮಂಗಳೂರು(reporterkarnataka.com): ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಸುಮಾರು 3 ಲಕ್ಷ ಮೌಲ್ಯದ ಗಾಂಜಾವನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದು,
ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ಕೊಣಾಜೆ ಪೊಲೀಸರು ಚೇಳೂರು ಚೆಕ್ ಪೋಸ್ಟ್ ನಲ್ಲಿ ಅಡ್ಡಗಟ್ಟಿ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಸರಗೋಡು ಬಂದ್ಯೋಡಿನ ಮಹಮ್ಮದ್ ನೌಫಾಲ್ (24), ಮಲಪುರಂ ಪೊನ್ನಾಣಿಯ ಜಂಶೀರ್ ಎಂ.(27), ಮಂಜೇಶ್ವರ ಮಂಗಲ್ಪಾಡಿಯ ಮಹಮ್ಮದ್ ಬಾತೀಶ್ (37) ಹಾಗೂ ಕಾಸರಗೋಡು ಮುಟ್ಟತೋಡಿ ಮಹಮ್ಮದ್ ಅಶ್ರಫ್ (42) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ ಉಪ್ಪಿನಂಗಡಿ, ಮೆಲ್ಕಾರ್, ಬೋಳಿಯಾರು ಮಾರ್ಗವಾಗಿ ಕೇರಳ ಕಡೆಗೆ ಕಾರಿನಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯವನ್ನು ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಪಡೆದುಕೊಂಡು ಚೇಳೂರು ಪೊಲೀಸ್ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ.

3,19,000 ಬೆಲೆಬಾಳುವ 32,195 ಕೆ.ಜಿ ಗಾಂಜಾ, ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಮತ್ತು ಖರೀದಿಸಲು ಉಪಯೋಗಿಸಿದ ರೂ.13,000 ಮೌಲ್ಯದ 4 ಮೊಬೈಲ್ ಫೋನ್ ಹಾಗೂ ಗಾಂಜಾ ತುಂಬಿಕೊಂಡು ಬರಲು ಬಳಸಿದ ಎರಡು ಟ್ರಾವೆಲ್ ಬ್ಯಾಗ್ ಸೇರಿದಂತೆ ರೂ.3 ಲಕ್ಷ ಮೌಲ್ಯದ ಆಲ್ಟ್ ಕಾರು ಒಟ್ಟು ರೂ.6,32,000 ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಕೊಣಾಜೆ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪಿ.ಎಸ್ ಐ ಶರಣಪ್ಪ ಭಂಡಾರಿ, ಸಿಬ್ಬಂದಿ ಶೈಲೇಂದ್ರ, ಮಹಮ್ಮದ್ ಶರೀಫ್, ಮಹಮ್ಮದ್ ಶರೀಫ್, ಮಹೇಶ್, ಪುರುಷೋತ್ತಮ, ದೀಪಕ್, ಅಶ್ವಿನ್, ಸುರೇಶ್, ಅಂಬರೀಶ್, ಬರಮ್ ಬಡಿಗೇರ್, ರೇಷ್ಮಾ, ಸುನಿತಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಆರೋಪಿಗಳೆಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು