2:59 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಬಸ್ಸಿನ ಬಾಗಿಲಲ್ಲೇ ನೇತಾಡಿ ಪ್ರಯಾಣಿಸುವ ಹೆಣ್ಮಕ್ಕಳು; ಅಥಣಿ ಶಾಸಕರೇ ಏನು ಮಾಡುತ್ತಿದ್ದೀರಿ?

27/12/2022, 17:11

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ದೃಶ್ಯ ನೋಡಿದ್ರೆ ಮೈ ಜುಮ್ ಅನ್ನುತ್ತೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಆಪಾಯ. ನಿಜಕ್ಕೂ ರಾಜ್ಯ ಸರ್ಕಾರವೇ ಮುಜುಗೂರ ಪಡುವಂತ ವಿಷಯ ಇದು.


ಇದೆಲ್ಲ ಕಂಡು ಬರುವುದು ಬೆಳಗಾವಿ ಜಿಲ್ಲೆಯ ಅಥಣಿ ಎಂಬ ಸಣ್ಣ ಪಟ್ಟಣದಲ್ಲಿ. ಇಲ್ಲಿ ಸರಕಾರಿ ಬಸ್ ಗಳ ಕೊರತೆಯಿಂದ ಸಾರ್ವಜನಿಕರ ಪಾಡು ಹೇಳಿ ತೀರದು. ಶಾಲಾ- ಕಾಲೇಜು ಮಕ್ಕಳು ಪಡುವ ಬವಣೆ ಯಾರಿಗೂ ಬೇಡ.

ಬಸ್ ರಶ್ ಆದಾಗ ಯುವಕರು ಬಾಗಿಲ ಮೆಟ್ಟಿಲಲ್ಲಿ ನಿಂತು ನೇತಾಡಿಕೊಂಡು ಹೋಗುವುದನ್ನು ಕಾಣುತ್ತೇವೆ. ಆದರೆ ಅಥಣಿಯಲ್ಲಿ ಹೆಣ್ಮಕ್ಕಳು ಕೂಡ ಬಾಗಿಲ ಮೆಟ್ಟಿಲಲ್ಲಿ ನಿಂತು ಪ್ರಯಾಣಿಸುವ ಪ್ರಮೇಯ ಒದಗಿ ಬಂದಿದೆ. ಇಲ್ಲಿನ ಶಾಸಕ ಮಹೇಶ್ ಕುಮಟಳ್ಳಿ ಏನು ಮಾಡುತ್ತಿದ್ದಾರೆ ಅಂತ ಮತದಾರರೀಗೆ ಅರ್ಥವಾಗುತ್ತಿಲ್ಲ. ಇಲ್ಲಿನ ಜವಾಬ್ದಾರಿ ಹೊಂದಿರುವ ಅವರು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ಮಾತನಾಡಿ ಬಸ್ಸಿನ ವ್ಯವಸ್ಥೆ ಮಾಡಬೇಕು. ಆದರೆ ಸದಾ ಐಷಾರಾಮಿ ಕಾರಿನಲ್ಲಿ ತಿರುಗುವ ಶಾಸಕರಿಗೆ ಇದೆಲ್ಲ ಬೇಕಾಗಿಲ್ಲ.
ಮಕ್ಕಳು ಬಸ್ಸಿನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ನೋಡಿದ್ರೆ ಯಾವನೇ ಪೋಷಕರು ತನ್ನ ಮಕ್ಕಳಿಗೆ ಶಿಕ್ಷಣವೇ ಬೇಡ ಅನ್ನೋ ತೀರ್ಮಾನಕ್ಕೆ ಬಂದರೆ ಅತಿಶಯೋಕ್ತಿಯಾಗಲಾರದು.


ಬಾಗಿಲಿಗೆ ಜೋತು ಬಿದ್ದು ಗ್ರಾಮೀಣ ವಿದ್ಯಾರ್ಥಿನಿ ಮನೆಗೆ ಹೋಗಲು ಹರಸಾಹಸ ಪಡುತ್ತಾರೆ. ಪ್ರಭಾವಿ ರಾಜಕಾರಣಿಗಳ ತವರಲ್ಲೇ ವಿದ್ಯಾರ್ಥಿಗಳ ಜೀವಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು