8:15 AM Sunday22 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಮನೆಗೆ ಹುಲಿವೇಷದ ತಂಡ ಎಂಟ್ರಿ!: ಟೈಗರ್ ಡ್ಯಾನ್ಸ್ ಮಾಡುತ್ತಾ ಸ್ವಾಗತಿಸಿದ ನಟ ರೂಪೇಶ್ ಶೆಟ್ಟಿ!!

28/12/2022, 17:12

ಮಂಗಳೂರು(reporterkarnataka.com): ಬಿಗ್​ ಬಾಸ್​ ಸೀಸನ್​ 9 ಸೀಸನ್ ರ ಫಿನಾಲೆಗೆ ಇನ್ನು ಕೆಲವೇ ಕೆಲವು ದಿನಗಳು ಉಳಿದಿರುವಾಗ ಬಿಗ್ ಬಾಸ್ ಮತ್ತಷ್ಟು ಜನರ ಮನಗೆಲ್ಲಲಾರಂಭಿಸಿದೆ. ಇದರ ನಡುವೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ಫಿನಾಲೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಾಗಲೇ ಸ್ಪರ್ಧಿಗಳಿಗೆ ಹೊಸ ಹೊಸ ಟ್ವಿಸ್ಟ್ ಸಿಗ್ತಾ ಇದೆ. ತಮ್ಮ ಅಚ್ಚುಮೆಚ್ಚಿನವರು ದೊಡ್ಮೆಗೆ ಎಂಟ್ರಿ ಆಗ್ತಾ ಇರುವ ಹೊತ್ತಿನಲ್ಲಿ ಬಿಗ್ ಬಾಸ್ ಮನೆಗೆ ತುಳುನಾಡಿನ ಹುಲಿಕುಣಿತ ತಂಡವು ಪ್ರವೇಶ ಆಗಿರುವುದು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡ್ತಾ ಇದೆ. ಹುಲಿಕುಣಿತ ತಂಡದ ಹುಲಿವೇಷಧಾರಿಗಳು ಎಂಟ್ರಿ ಆಗ್ತಾ ಇದ್ದಂತೆ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಕುಣಿಯುತ್ತಲೇ ಬಂದು ತಂಡವನ್ನು ಸ್ವಾಗತಿಸಿದರು. ರೂಪೇಶ್ ಶೆಟ್ಟಿ ಅವರಿಗೆ ಹುಲಿಕುಣಿತದ ತಂಡ ನೋಡಿ ಭರ್ಜರಿ ಸ್ಪೆಪ್ಸ್ ಹಾಕಿಯೇ ಬಿಟ್ಟರೂ ಉಳಿದ ಸ್ಪರ್ಧಿಗಳು ಕೂಡ ಹುಲಿ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಕಂಡು ಬಂತು.

ಕರಾವಳಿ ಭಾಗದಲ್ಲಿ ವಿಶಿಷ್ಟ ಛಾಪು ಮುಡಿಸಿರುವ ಹುಲಿವೇಷ ಕುಣಿತವು ತುಳುನಾಡಿನ ಹೆಮ್ಮೆಯೆಂದೆ ಹೇಳಬಹುದು. ಬಿಗ್ ಬಾಸ್ ಮನೆಯಲ್ಲಿ ಹುಲಿ ವೇಷಧಾರಿಗಳು ತಮ್ಮ ಕುಣಿತದ ಪಟ್ಟು, ಚಳಕ ತೋರಿಸಿದ್ದು ಕರಾವಳಿಯ ವೈಶಿಷ್ಟ್ಯವನ್ನು ಹೆಚ್ಚಿಸಿದಂತೆ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು