2:43 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಮನೆಗೆ ಹುಲಿವೇಷದ ತಂಡ ಎಂಟ್ರಿ!: ಟೈಗರ್ ಡ್ಯಾನ್ಸ್ ಮಾಡುತ್ತಾ ಸ್ವಾಗತಿಸಿದ ನಟ ರೂಪೇಶ್ ಶೆಟ್ಟಿ!!

28/12/2022, 17:12

ಮಂಗಳೂರು(reporterkarnataka.com): ಬಿಗ್​ ಬಾಸ್​ ಸೀಸನ್​ 9 ಸೀಸನ್ ರ ಫಿನಾಲೆಗೆ ಇನ್ನು ಕೆಲವೇ ಕೆಲವು ದಿನಗಳು ಉಳಿದಿರುವಾಗ ಬಿಗ್ ಬಾಸ್ ಮತ್ತಷ್ಟು ಜನರ ಮನಗೆಲ್ಲಲಾರಂಭಿಸಿದೆ. ಇದರ ನಡುವೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ಫಿನಾಲೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಾಗಲೇ ಸ್ಪರ್ಧಿಗಳಿಗೆ ಹೊಸ ಹೊಸ ಟ್ವಿಸ್ಟ್ ಸಿಗ್ತಾ ಇದೆ. ತಮ್ಮ ಅಚ್ಚುಮೆಚ್ಚಿನವರು ದೊಡ್ಮೆಗೆ ಎಂಟ್ರಿ ಆಗ್ತಾ ಇರುವ ಹೊತ್ತಿನಲ್ಲಿ ಬಿಗ್ ಬಾಸ್ ಮನೆಗೆ ತುಳುನಾಡಿನ ಹುಲಿಕುಣಿತ ತಂಡವು ಪ್ರವೇಶ ಆಗಿರುವುದು ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡ್ತಾ ಇದೆ. ಹುಲಿಕುಣಿತ ತಂಡದ ಹುಲಿವೇಷಧಾರಿಗಳು ಎಂಟ್ರಿ ಆಗ್ತಾ ಇದ್ದಂತೆ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಕುಣಿಯುತ್ತಲೇ ಬಂದು ತಂಡವನ್ನು ಸ್ವಾಗತಿಸಿದರು. ರೂಪೇಶ್ ಶೆಟ್ಟಿ ಅವರಿಗೆ ಹುಲಿಕುಣಿತದ ತಂಡ ನೋಡಿ ಭರ್ಜರಿ ಸ್ಪೆಪ್ಸ್ ಹಾಕಿಯೇ ಬಿಟ್ಟರೂ ಉಳಿದ ಸ್ಪರ್ಧಿಗಳು ಕೂಡ ಹುಲಿ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಕಂಡು ಬಂತು.

ಕರಾವಳಿ ಭಾಗದಲ್ಲಿ ವಿಶಿಷ್ಟ ಛಾಪು ಮುಡಿಸಿರುವ ಹುಲಿವೇಷ ಕುಣಿತವು ತುಳುನಾಡಿನ ಹೆಮ್ಮೆಯೆಂದೆ ಹೇಳಬಹುದು. ಬಿಗ್ ಬಾಸ್ ಮನೆಯಲ್ಲಿ ಹುಲಿ ವೇಷಧಾರಿಗಳು ತಮ್ಮ ಕುಣಿತದ ಪಟ್ಟು, ಚಳಕ ತೋರಿಸಿದ್ದು ಕರಾವಳಿಯ ವೈಶಿಷ್ಟ್ಯವನ್ನು ಹೆಚ್ಚಿಸಿದಂತೆ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು