2:21 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ: ಪಂಚಾಮೃತ ಮಹಾಭಿಷೇಕ ಸಮರ್ಪಣೆ

28/12/2022, 17:26

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಬಿಜೆಪಿಯ ಫೈಯರ್ ಬ್ರಾಂಡ್ ನಾಯಕಿ,
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಂಕಲ್ಪ ನೆರವೇರಿಸಿದ ಬಳಿಕ ಸಚಿವೆ ಕುಟುಂಬ ಸಮೇತ
ದೇವರ ದರುಶನ ಪಡೆದರು. ಪಂಚಾಮೃತ ಮಹಾಭಿಷೇಕ ಸೇವೆ ಸಮರ್ಪಿಸಿದರು. ಸಚಿವೆ ಮಧ್ಹಾಹ್ನ ದೇವರ ಮಹಾಪೂಜೆ
ವೀಕ್ಷಿಸಿ ಸೇವೆ ನೆರವೇರಿಸಿದರು.

ದೇವಳದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ಸಚಿವರಿಗೆ ಶಾಲು ಮತ್ತು ದೇವರ ಮಹಾಪ್ರಸಾದ ನೀಡಿದರು.
ನಂತರ ಸಚಿವೆ ಹೊಸಳಿಗಮ್ಮನ ದರ್ಶನ ಪಡೆದರು. ಬಳಿಕ ದೇವಳದಲ್ಲಿ ಭೋಜನ ಸ್ವೀಕರಿಸಿದರು. ನಂತರ ಆಡಳಿತ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಶಾಲು ಹೊದಿಸಿ ದೇವರ ಮಹಾಪ್ರಸಾದ ನೀಡಿ ಗೌರವಿಸಿದರು. ಬ್ರಹ್ಮರಥ ಎಳೆದ ಪವಿತ್ರ ಬೆತ್ತವನ್ನು ಸಚಿವರಿಗೆ ನೀಡಿದರು. ಬಳಿಕ ಆದಿಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ಸಚಿವರು ದೇವರ ದರುಶನ ಪಡೆದು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು.

ಕುಕ್ಕೆ ಕ್ಷೇತ್ರದಲ್ಲಿ ಸೇವೆ ನೆರವೇರಿಸಲು ಸಲುವಾಗಿಯೇ ಸಚಿವರ ದೆಹಲಿಯಿಂದ ಆಗಮಿಸಿದರು. ಬೆಳಗ್ಗೆ 9 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿ ಸಂಕಲ್ಪ ವಿದಿ ವಿಧಾನ ನೆರವೇರಿಸಿ ಪಂಚಾಮೃತ ಮಹಾಭಿಷೇಕ ಸೇವೆ ನೆರವೇರಿಸಿದರು. 1 ಗಂಟೆಗೂ ಅಧಿಕ ಕಾಲ ದೇವರ ಪಂಚಾಮೃತ ಮಹಾಭಿಷೇಕ ವೀಕ್ಷಿಸಿದರು.

ಸಚಿವೆ ಜತೆಗೆ ಅವರ ಪತಿ ಜುಬಿನ್ ಇರಾನಿ ಮತ್ತು ಪುತ್ರಿ ಜೋಯಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು