6:30 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸಮ್ಮೇದ ಶಿಖರ್ಜಿ ಪ್ರವಾಸಿ ತಾಣ: ಜೈನರ ಆಕ್ಷೇಪ; ಮೂಡುಬಿದರೆಯಲ್ಲಿ ಬೃಹತ್ ಜಾಥಾ

28/12/2022, 20:59

ಮೂಡುಬಿದಿರೆ(reporterkarnataka.com): ಜೈನ ಧರ್ಮೀಯರ ಪವಿತ್ರ ಕ್ಷೇತ್ರ ಜಾರ್ಖಂಡ್‌ನ ಶ್ರೀ ಸಮ್ಮೇದ ಶಿಖರ್ಜಿ ಪ್ರದೇಶವನ್ನು ಅಲ್ಲಿನ ಸರ್ಕಾರ ಪ್ರವಾಸಿ ತಾಣವನ್ನಾಗಿ ಮಾಡಲು ಹೊರಡಿಸಿದ ಆದೇಶದ ವಿರುದ್ಧ ದ.ಕ. ಮತ್ತು ಉಡುಪಿ ಜಿಲ್ಲೆಯ ಜೈನ ಸಮಾಜದವರಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥಾ ನಡೆಯಿತು..

ಜೈನ ಮಠದ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ಸಾವಿರ ಕಂಬ ಬಸದಿ ಆವರಣದಿಂದ ಮುಖ್ಯ ರಸ್ತೆಯ ಮೂಲಕ ಆಡಳಿತ ಸೌಧದವರೆಗೆ ದ.ಕ, ಉಡುಪಿ ಜಿಲ್ಲೆಯ ಸಾವಿರಾರು ಜೈನ ಸಮಾಜದವರು ಮೌನ ಪ್ರತಿಭಟನೆ ನಡೆಸಿದರು.

ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ, ಸಮ್ಮೇದ ಶಿಖರ್ಜಿ ಜೈನರ ಪವಿತ್ರ ಕ್ಷೇತ್ರವಾಗಿದ್ದು 24 ತೀರ್ಥಂಕರರ ಪೈಕಿ ತೀರ್ಥಂಕರರು ಇಲ್ಲಿ ತಪಸ್ಸು ಮಾಡಿ ಸಿದ್ಧಿ ಪ್ರಾಪ್ತಿ ಹೊಂದಿದ ಪುಣ್ಯ ಭೂಮಿ. ನಿತ್ಯ ಸಾವಿರಾರು ಜೈನರು ಶ್ರದ್ಧಾ ಭಕ್ತಿಯಿಂದ ಕ್ಷೇತ್ರದ ದರ್ಶನ ಮಾಡಿ ಪುನೀತರಾಗುತ್ತಿದ್ದಾರೆ. ಇಂತಹ ಪವಿತ್ರ ಕ್ಷೇತ್ರವನ್ನು ಜಾರ್ಖಂಡ ಸರ್ಕಾರ ಪ್ರವಾಸಿ ತಾಣವಾಗಿಸಲು ತೀರ್ಮಾನ ಕೈಗೊಂಡಿರುವುದು ಅಲ್ಪ ಸಂಖ್ಯಾತ ಜೈನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದಂತಾಗಿದೆ‌ ಎಂದು ವಿರೋಧ ವ್ಯಕ್ತಪಡಿಸಿದರು. ದಬ್ಬಾಳಿಕೆಯನ್ನು ನಿಲ್ಲಿಸಿ ಪುಣ್ಯ ಭೂಮಿಯ ಪಾವಿತ್ರ್ಯತೆಯನ್ನು ರಕ್ಷಿಸಬೇಕು. ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಜಾರ್ಖಂಡ ಮುಖ್ಯಮಂತ್ರಿ, ರಾಷ್ಟ್ರಪತಿ, ಪ್ರಧಾಮಮಂತ್ರಿಯವರನ್ನು ಈ ಮೂಲಕ ಒತ್ತಾಯಿಸುತ್ತೇವೆ ಎಂದರು..

ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ, ಚೌಟರ ಅರಮನೆಯ ಕುಲದೀಪ್ ಎಂ., ಮಾಜಿ ಸಚಿವ ಅಭಯಚಂದ್ರ ಜೈನ್, ಜೈನ್ ಮಿಲನ್ ವಲಯ ಅಧ್ಯಕ್ಷ ಪುಷ್ಪರಾಜ್ ಜೈನ್, ಬಸದಿಗಳ ಮೊಕ್ತೇಸರರಾದ ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್, ಆದರ್ಶ್, ಜೈನ ಸಮಾಜದ ಪ್ರಮುಖರಾದ ಕೆ.ಪಿ ಜಗದೀಶ್ ಅಧಿಕಾರಿ, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಅಭಿಜಿತ್ ಎಂ, , ಡಾ.ಮಹಾವೀರ ಜೈನ್, ನಮಿರಾಜ್, ಧನಕೀರ್ತಿ ಬಲಿಪ, ರಾಜವರ್ಮ ಬೈಲಂಗಡಿ, ಸುಭಾಶ್ಚಂದ್ರ ಚೌಟ, ಯತಿರಾಜ್ ಜೈನ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಕೃಷ್ಣರಾಜ ಹೆಗ್ಡೆ ಸ್ವಾಗತಿಸಿ ಮುನಿರಾಜ ರೆಂಜಾಳ ನಿರೂಪಿಸಿದರು. ಶೈಲೇಂದ್ರ ಕುಮಾರ್ ಪ್ರಾಸ್ತಾವಿ ಮಾತುಗಳನ್ನಾಡಿದರು. ಪದ್ಮಪ್ರಸಾದ್ ಜೈನ್ ಮನವಿ ಪತ್ರ ವಾಚಿಸಿದರು. ಪ್ರವೀಣ್‌ಚಂದ್ರ ಜೈನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು