1:48 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

52 ಲಕ್ಷ ವೆಚ್ಚದಲ್ಲಿ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

28/12/2022, 21:18

ಸುರತ್ಕಲ್ (reporterkarnataka.com):
52 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಆಡಳಿತಾತ್ಮಕವಾಗಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರವಾಸೋದ್ಯಮ, ಮೂಲಸೌಕರ್ಯ, ನೀರಾವರಿ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ. ವಾರ್ಡ್ 7ರಲ್ಲಿ ಲೋಕೋಪಯೋಗಿ, ನೀರಾವರಿ, ಪಾಲಿಕೆ, ರಾಜ್ಯದ ವಿಶೇಷ ಅನುದಾನದಡಿ ಈವರೆಗೆ 4.50 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ ಎಂದರು.

ಅಡ್ಯಾರು ಪ್ರದೇಶದ ಕಂದಾಯ ವಿಭಾಗವನ್ನು ಗುರುಪುರ ಹೋಬಳಿಯಿಂದ ಮಂಗಳೂರು ಹೋಬಳಿಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಸ್ಥಳೀಯ ಜನತೆಗೆ ಸಮಯ ಉಳಿತಾಯ ಹಾಗೂ ಕಡತ ವಿಲೇವಾರಿ ಸರಳವಾಗಲಿದೆ ಎಂದರು.

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ನಯನ ಆರ್.ಕೋಟ್ಯಾನ್, ಪ್ರಮುಖರಾದ ವಿಠ್ಠಲ್ ಸಾಲಿಯಾನ್,ಜಯಂತ ಕರ್ಕೇರ,ಜಯಂತ ಸಾಲಿಯಾನ್,ದೀಪಕ್ ಅಮೀನ್,ಕೇಶವ ಕುಂದರ್ ಅಶೋಕ್ ಪುತ್ರನ್,ವಿಠ್ಠಲ್, ಧೀರಜ್,ಪ್ರವೀಣ್ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು