4:09 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

52 ಲಕ್ಷ ವೆಚ್ಚದಲ್ಲಿ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

28/12/2022, 21:18

ಸುರತ್ಕಲ್ (reporterkarnataka.com):
52 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಇಡ್ಯಾ ಪಶ್ಚಿಮ ವಾರ್ಡ್‌ ನಂಬ್ರ 7ರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಆಡಳಿತಾತ್ಮಕವಾಗಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರವಾಸೋದ್ಯಮ, ಮೂಲಸೌಕರ್ಯ, ನೀರಾವರಿ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ. ವಾರ್ಡ್ 7ರಲ್ಲಿ ಲೋಕೋಪಯೋಗಿ, ನೀರಾವರಿ, ಪಾಲಿಕೆ, ರಾಜ್ಯದ ವಿಶೇಷ ಅನುದಾನದಡಿ ಈವರೆಗೆ 4.50 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ ಎಂದರು.

ಅಡ್ಯಾರು ಪ್ರದೇಶದ ಕಂದಾಯ ವಿಭಾಗವನ್ನು ಗುರುಪುರ ಹೋಬಳಿಯಿಂದ ಮಂಗಳೂರು ಹೋಬಳಿಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಸ್ಥಳೀಯ ಜನತೆಗೆ ಸಮಯ ಉಳಿತಾಯ ಹಾಗೂ ಕಡತ ವಿಲೇವಾರಿ ಸರಳವಾಗಲಿದೆ ಎಂದರು.

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ನಯನ ಆರ್.ಕೋಟ್ಯಾನ್, ಪ್ರಮುಖರಾದ ವಿಠ್ಠಲ್ ಸಾಲಿಯಾನ್,ಜಯಂತ ಕರ್ಕೇರ,ಜಯಂತ ಸಾಲಿಯಾನ್,ದೀಪಕ್ ಅಮೀನ್,ಕೇಶವ ಕುಂದರ್ ಅಶೋಕ್ ಪುತ್ರನ್,ವಿಠ್ಠಲ್, ಧೀರಜ್,ಪ್ರವೀಣ್ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು