1:40 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ

05/07/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಗೌಡ ಪಾಟೀಲ್  ಮಾತನಾಡಿ, ಇಂದು ಸರಕಾರ ಅನೇಕ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ರೈತರು ಬೆಳೆ ವಿಮಾ ತುಂಬುವ ಸಂದರ್ಭದಲ್ಲಿ ಸರಿಯಾದ ಬೆಳೆಯನ್ನು ನಮೊದಿಸಬೇಕು. ರೈತ ಬೆಳೆದಿರುವ ಬೆಳೆ ಬೇರೆ ಇರುತ್ತದೆ. ಆದರೆ ಆನ್ ಲೈನ್ ಬೇರೆ ಬೆಳೆಯ ಬಗ್ಗೆ ನಮೂದಿಸುತ್ತೀರಿ. ಇದರಿಂದ ನಮಗೆ ತೊಂದರೆ ಆಗುತ್ತದೆ. ಅದಕ್ಕಾಗಿ ಸರಿಯಾಗಿ ವಿಮೆಯನ್ನು ತುಂಬಬೇಕು. ಹಾಗೆ ಗೊಬ್ಬರವನ್ನು ಹಾಕುವಾಗ ಸರಿಯಾಗಿ ಹಾಕಬೇಕು. ಹೆಚ್ಚುಕಡಿಮೆ ಹಾಕುವುದರಿಂದ ಬೆಳೆ ಸರಿಯಾಗಿ ಬರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಬನ್ನಿ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಗ್ರಾಮದ ಮುಖಂಡರಾದ ಜಗದೀಶಸ್ವಾಮಿ , ಅಮರೇಗೌಡ, ಬಸವರಾಜ ವಡಗೇರಿ, ವೆಂಕಟರಡ್ಡಿ , ಕರಿಯಪ್ಪ , ಸಹಾಯಕ ಕೃಷಿ ಅದಿಕಾರಿ ಸದ್ದಾಂ ಹುಸೇನ್ , ತಾಹೀರಬೇಗಂ, ಉಪನ್ಯಾಸಕರಾದ ನಾಗೇಶ, ಸಿದ್ದಾರ್ಥ ಪಾಟೀಲ್, ಶ್ರೀಕಾಂತ್ ,  ಸಿಬ್ಬಂದಿಗಳಾದ ಪ್ರವೀಣ್ಕುಮಾರ, ಮಂಜುನಾಥ , ಮುದುಕಪ್ಪ , ಹೋಬಳಿ ಕೇಂದ್ರದ ರೈತ ಬಾಂಧವರು ಕಾರ್ಯಕ್ರಮದಲ್ಲಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು