1:59 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ

05/07/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಗೌಡ ಪಾಟೀಲ್  ಮಾತನಾಡಿ, ಇಂದು ಸರಕಾರ ಅನೇಕ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ರೈತರು ಬೆಳೆ ವಿಮಾ ತುಂಬುವ ಸಂದರ್ಭದಲ್ಲಿ ಸರಿಯಾದ ಬೆಳೆಯನ್ನು ನಮೊದಿಸಬೇಕು. ರೈತ ಬೆಳೆದಿರುವ ಬೆಳೆ ಬೇರೆ ಇರುತ್ತದೆ. ಆದರೆ ಆನ್ ಲೈನ್ ಬೇರೆ ಬೆಳೆಯ ಬಗ್ಗೆ ನಮೂದಿಸುತ್ತೀರಿ. ಇದರಿಂದ ನಮಗೆ ತೊಂದರೆ ಆಗುತ್ತದೆ. ಅದಕ್ಕಾಗಿ ಸರಿಯಾಗಿ ವಿಮೆಯನ್ನು ತುಂಬಬೇಕು. ಹಾಗೆ ಗೊಬ್ಬರವನ್ನು ಹಾಕುವಾಗ ಸರಿಯಾಗಿ ಹಾಕಬೇಕು. ಹೆಚ್ಚುಕಡಿಮೆ ಹಾಕುವುದರಿಂದ ಬೆಳೆ ಸರಿಯಾಗಿ ಬರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಬನ್ನಿ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಗ್ರಾಮದ ಮುಖಂಡರಾದ ಜಗದೀಶಸ್ವಾಮಿ , ಅಮರೇಗೌಡ, ಬಸವರಾಜ ವಡಗೇರಿ, ವೆಂಕಟರಡ್ಡಿ , ಕರಿಯಪ್ಪ , ಸಹಾಯಕ ಕೃಷಿ ಅದಿಕಾರಿ ಸದ್ದಾಂ ಹುಸೇನ್ , ತಾಹೀರಬೇಗಂ, ಉಪನ್ಯಾಸಕರಾದ ನಾಗೇಶ, ಸಿದ್ದಾರ್ಥ ಪಾಟೀಲ್, ಶ್ರೀಕಾಂತ್ ,  ಸಿಬ್ಬಂದಿಗಳಾದ ಪ್ರವೀಣ್ಕುಮಾರ, ಮಂಜುನಾಥ , ಮುದುಕಪ್ಪ , ಹೋಬಳಿ ಕೇಂದ್ರದ ರೈತ ಬಾಂಧವರು ಕಾರ್ಯಕ್ರಮದಲ್ಲಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು