6:04 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ

05/07/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಗೌಡ ಪಾಟೀಲ್  ಮಾತನಾಡಿ, ಇಂದು ಸರಕಾರ ಅನೇಕ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ರೈತರು ಬೆಳೆ ವಿಮಾ ತುಂಬುವ ಸಂದರ್ಭದಲ್ಲಿ ಸರಿಯಾದ ಬೆಳೆಯನ್ನು ನಮೊದಿಸಬೇಕು. ರೈತ ಬೆಳೆದಿರುವ ಬೆಳೆ ಬೇರೆ ಇರುತ್ತದೆ. ಆದರೆ ಆನ್ ಲೈನ್ ಬೇರೆ ಬೆಳೆಯ ಬಗ್ಗೆ ನಮೂದಿಸುತ್ತೀರಿ. ಇದರಿಂದ ನಮಗೆ ತೊಂದರೆ ಆಗುತ್ತದೆ. ಅದಕ್ಕಾಗಿ ಸರಿಯಾಗಿ ವಿಮೆಯನ್ನು ತುಂಬಬೇಕು. ಹಾಗೆ ಗೊಬ್ಬರವನ್ನು ಹಾಕುವಾಗ ಸರಿಯಾಗಿ ಹಾಕಬೇಕು. ಹೆಚ್ಚುಕಡಿಮೆ ಹಾಕುವುದರಿಂದ ಬೆಳೆ ಸರಿಯಾಗಿ ಬರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಬನ್ನಿ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಗ್ರಾಮದ ಮುಖಂಡರಾದ ಜಗದೀಶಸ್ವಾಮಿ , ಅಮರೇಗೌಡ, ಬಸವರಾಜ ವಡಗೇರಿ, ವೆಂಕಟರಡ್ಡಿ , ಕರಿಯಪ್ಪ , ಸಹಾಯಕ ಕೃಷಿ ಅದಿಕಾರಿ ಸದ್ದಾಂ ಹುಸೇನ್ , ತಾಹೀರಬೇಗಂ, ಉಪನ್ಯಾಸಕರಾದ ನಾಗೇಶ, ಸಿದ್ದಾರ್ಥ ಪಾಟೀಲ್, ಶ್ರೀಕಾಂತ್ ,  ಸಿಬ್ಬಂದಿಗಳಾದ ಪ್ರವೀಣ್ಕುಮಾರ, ಮಂಜುನಾಥ , ಮುದುಕಪ್ಪ , ಹೋಬಳಿ ಕೇಂದ್ರದ ರೈತ ಬಾಂಧವರು ಕಾರ್ಯಕ್ರಮದಲ್ಲಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು