3:25 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ

29/12/2022, 10:32

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ “ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಸುಮಾರು ಒಂದು ಗಂಟೆಯ ಕಾಲ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಭರತ ವೈಭವ ಕಾರ್ಯಕ್ರಮನ್ನು ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್‌ ರೈ ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ -ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ ರೈ ಬೆಡ್ರುಮಾರು ,ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯ ಕುಮಾರ್ ರೈ, ಕೋರಂಗ ಮೋಹನ ಆಳ್ವ ಮುಂಡಲಗುತ್ತು ಹಾಗೂ ವಿಫುಲ್ ಕಡಮಜಲು ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್‌ ಮತ್ತು ದೇಶಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು