12:59 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ

29/12/2022, 10:32

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ “ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಸುಮಾರು ಒಂದು ಗಂಟೆಯ ಕಾಲ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಭರತ ವೈಭವ ಕಾರ್ಯಕ್ರಮನ್ನು ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್‌ ರೈ ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ -ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ ರೈ ಬೆಡ್ರುಮಾರು ,ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯ ಕುಮಾರ್ ರೈ, ಕೋರಂಗ ಮೋಹನ ಆಳ್ವ ಮುಂಡಲಗುತ್ತು ಹಾಗೂ ವಿಫುಲ್ ಕಡಮಜಲು ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್‌ ಮತ್ತು ದೇಶಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು