3:34 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ

29/12/2022, 10:32

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ “ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಸುಮಾರು ಒಂದು ಗಂಟೆಯ ಕಾಲ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಭರತ ವೈಭವ ಕಾರ್ಯಕ್ರಮನ್ನು ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್‌ ರೈ ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ -ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ ರೈ ಬೆಡ್ರುಮಾರು ,ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯ ಕುಮಾರ್ ರೈ, ಕೋರಂಗ ಮೋಹನ ಆಳ್ವ ಮುಂಡಲಗುತ್ತು ಹಾಗೂ ವಿಫುಲ್ ಕಡಮಜಲು ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್‌ ಮತ್ತು ದೇಶಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು