3:30 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ

29/12/2022, 10:32

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ “ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಸುಮಾರು ಒಂದು ಗಂಟೆಯ ಕಾಲ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಭರತ ವೈಭವ ಕಾರ್ಯಕ್ರಮನ್ನು ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್‌ ರೈ ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ -ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ ರೈ ಬೆಡ್ರುಮಾರು ,ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯ ಕುಮಾರ್ ರೈ, ಕೋರಂಗ ಮೋಹನ ಆಳ್ವ ಮುಂಡಲಗುತ್ತು ಹಾಗೂ ವಿಫುಲ್ ಕಡಮಜಲು ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್‌ ಮತ್ತು ದೇಶಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು