5:25 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಜೈಲಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡಿದರೆ ಕಠಿಣ ಕ್ರಮ: ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಹಠಾತ್ ಭೇಟಿ ನೀಡಿದ ಗೃಹ ಸಚಿವರ ಎಚ್ಚರಿಕೆ

29/12/2022, 16:43

ಬೆಳಗಾವಿ(reporterkarnataka.com): ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಕೇಂದ್ರ ಕಾರಾಗೃಹವಾದ ಹಿಂಡಲಗಾ ಜೈಲಿಗೆ ಹಠಾತ್ ಭೇಟಿ ನೀಡಿದ ಗೃಹ ಸಚಿವರು ನಂತರ ಜೈಲಿನ ಹಿರಿಯ ಅಧಿಕಾರಿಗಳ ಜತೆ
ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.
ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಗಳು ಹಾಗೂ ಮಾದಕ ವಸ್ತುಗಳನ್ನು ಸರಬರಾಜು ತಪ್ಪಿಸಲು, ಅತ್ಯಾಧುನಿಕ ತಪಾಸಣಾ ಯಂತ್ರ ಅಳವಡಿಸಲಾಗಿದೆ. ಆದರೂ, ಕೆಲವು ಬಾರಿ ಸಿಬ್ಬಂದಿ ಕಣ್ಣು ತಪ್ಪಿಸಿ, ನಿಷೇಧಿತ ಪದಾರ್ಥಗಳು ಜೈಲಿನೊಳಗೆ ಜಪ್ತಿ ಮಾಡಿರುವುದು ನಡೆದಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ತಪ್ಪಿತಸ್ಥರ ವಿರುದ್ಧ, ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಜೈಲಿನ ಒಳಗಿರುವ, ಟೈಲರಿಂಗ್ ಘಟಕ ಹಾಗೂ ಮರಗೆಲಸ ಘಟಕಗಳಿಗೆ ಭೇಟಿ ನೀಡಿ, ಆಧುನಿಕ ಉಪಕರಣ ಗಳನ್ನು ಒದಗಿಸಲು, ಕ್ರಮ ಕೈಗೊಳ್ಳಲಾಗುವುದು ಎಂದರು.

ಅತಿ ಭದ್ರತಾ ಸೆಲ್ ಗಳು, ಆಸ್ಪತ್ರೆ ಹಾಗೂ ಕೈದಿಗಳೇ
ನಿರ್ವಹಿಸುತ್ತಿರುವ ಎಫ್ ಎಂ ಸ್ಟೇಷನ್, ಅಡುಗೆ ಮನೆ ಹಾಗೂ ಇನ್ನಿತರ ವ್ಯವಸ್ಥೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು