7:30 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು