11:35 PM Thursday2 - May 2024
ಬ್ರೇಕಿಂಗ್ ನ್ಯೂಸ್
ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು