12:01 PM Tuesday17 - June 2025
ಬ್ರೇಕಿಂಗ್ ನ್ಯೂಸ್
Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ…

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು