5:07 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು