5:47 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು