11:47 PM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನ ಉದ್ಘಾಟನೆ; ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ.‌ ಭರತ್ ಶೆಟ್ಟಿ ಚಾಲನೆ

30/12/2022, 21:32

ಸುರತ್ಕಲ್(reporterkarnataka.com): ಕೃಷ್ಣಾಪುರದಲ್ಲಿರುವ ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಯನ್ನು ಶಾಸಕ ಡಾ.‌ ಭರತ್ ಶೆಟ್ಟಿ ವೈ. ನೆರವೇರಿಸಿದರು.


ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ಶಕ್ತಿಯಾಗಿ ದೈವ ದೇವರು ತಮಗೆ ಬೇಕಾದ ಸೇವೆಯನ್ನು ಪಡೆದುಕೊಳ್ಳುತ್ತಾರೆ. ನಾವು ಎಂಬುದು ಏನಿಲ್ಲ. ಭಕ್ತಿಯಿಂದ ನಾವು ನಮ್ಮ ದೈವ ದೇವರನ್ನು ಪೂಜಿಸಿದರೆ ಎಲ್ಲರಿಗೂ ಒಳಿತಾಗುತ್ತದೆ .ಇದಕ್ಕೆ ಹಲವಾರು ನಿದರ್ಶನಗಳಿವೆ ಎಂದರು.

ಇದೇ ಸಂದರ್ಭ ನಮ್ಮ ನಂಬಿಕೆಗೆ ಧಕ್ಕೆ ತರುವವರ ವಿರುದ್ದ ಒಕ್ಕೊರಲಿನಿಂದ ಖಂಡಿಸಬೇಕೆಂದರು.
ಶ್ರೀ ಕೋಡ್ದಬ್ಬು ದೈವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಕೆ. ಸಿ. ನಾಗೇಂದ್ರ ಭಾರಧ್ವಾಜ್, ಮೇಯರ್ ಜಯಾನಂದ ಅಂಚನ್,
ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ,
ದೈವಸ್ಥಾನದ ಲೋಕೇಶ್ ಗುರಿಕಾರ,ವಿಶ್ವನಾಥ ದೇವಸ್ಥಾನ ಇದರ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಲಕ್ಷ್ಮೀ ಶೇಖರ್ ದೇವಾಡಿಗ,
ಪ್ರಶಾಂತ್ ಮೂಡಾಯಿಕೋಡಿ,ಪಣಂಬೂರು ಮಂಜುಕಾವ ಕಾವರಮನೆ, ಸದಾಶಿವ ಐತಾಳ್ ,ಲಕ್ಷ್ಮೀಶ ದೇವಾಡಿಗ, ಉದ್ಯಮಿ ರಮಾನಾಥ ಶೆಟ್ಟಿ ,ಹಿರಿಯರಾದ ಮಹಾಬಲ ರೈ ಪಣಂಬೂರು ಕಾವರ ಮನೆ, ಜಯಂತಿ ಎಸ್. ಶೆಟ್ಟಿ, ಪಣಂಬೂರು ವಿಶ್ವಕರ್ಮ ಸಮಾಜ ಸೇವಾ ಸಂಘ ಆಚಾರ್ಯ , ಗುತ್ತಿಗೆದಾರರಾದ ನಾಗರಾಜ್ ನಾಯ್ಕ್ ಸುಶೀಲ ಕೆ.ಶೆಟ್ಟಿ, ಕೇಶವ ಸನಿಲ್, ಜತೆ ಗುರಿಕಾರರಾದ ಚಂದ್ರಹಾಸ ಗುರಿಕಾರ, ದುರ್ಗಾಪ್ರಸಾದ್ ಹೊಳ್ಳಅಧ್ಯಕ್ಷರಾದ ಸದಾನಂದ ಸನಿಲ್, ಅಣ್ಣಪ್ಪ ದೇವಾಡಿಗ, ಸುಧಾಕರ ಕಾಮತ್ , ಶ್ರೀನಿವಾಸ್, ಗುತ್ತಿಗೆದಾರರಾದ ಉಮಾಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು