5:22 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ರಥಬೀದಿಯಲ್ಲಿ ಫುಟ್ ಪಾತ್ ಏರುವ ವಾಹನಗಳು !: ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ !!

05/07/2021, 14:52

ಮಂಗಳೂರು(reporterkarnataka news): 

ಇಡೀ ರಾಜ್ಯವೇ ಅನ್ ಲಾಕ್ ಆಗುತ್ತಿದ್ದಂತೆ ಕಡಲನಗರಿ ಮಂಗಳೂರು ಕೂಡ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿದೆ. ಎರಡು ತಿಂಗಳ ಲಾಕ್ ಡೌನ್ ಬಳಿಕ ನಗರದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ನಗರದ ರಥಬೀದಿಯಲ್ಲಿ ಮಾನವ ನಿರ್ಮಿತ ಸಮಸ್ಯೆಗಳು ತಲೆ ಎತ್ತಲಾರಂಭಿದೆ. ‘ಹಿರಿಯಕ್ಕನ ಚಾಳಿ ಮನೆ ಮಂದಿಗೆ’ ಎನ್ನುವಂತೆ ರಥಬೀದಿಯಲ್ಲಿ ಫುಟ್ ಪಾತ್ ಮೇಲೆ ವಾಹನ ಪಾರ್ಕ್ ಮಾಡುವ ಕೆಟ್ಟ ಪರಂಪರೆ ಮತ್ತೆ ಮುಂದುವರಿದಿದೆ.

ಕಡಲನಗರಿಯ ಒಡಲಿನಲ್ಲಿರುವ ರಥಬೀದಿಯ ನಿವಾಸಿಗಳ ದಶಕಗಳ ಹೋರಾಟದ ಫಲವಾಗಿ ಇಲ್ಲಿನ ರಸ್ತೆ ಅಗಲೀಕರಣ ನಡೆದಿದೆ. ಕಿತ್ತು ಹೋದ ಫುಟ್ ಪಾತ್ ಗಳಿಗೆ ಬಣ್ಣದ ಹಾಸುಗಲ್ಲುಗಳನ್ನು ಹಾಸಲಾಗಿದೆ. ಆದರೆ ಇವೆಲ್ಲವೂ ‘ಎಲ್ಲ ಬಣ್ಣವನ್ನು ಮಸಿ ನುಂಗಿತು’ ಎನ್ನುವ ಹಾಗೆ ಆಗಿದೆ. ಜನರು ಓಡಾಡಲು ಮಾಡಿರುವ ಸುಸಜ್ಜಿತ ಫುಟ್ ಪಾತ್ ಕೆಲವರಿಗೆ ಕಾರು ಪಾರ್ಕಿಂಗ್ ಮಾಡುವ ಸ್ಥಳವಾಗಿ ಪರಿವರ್ತನೆಗೊಂಡಿದೆ. ಇದರಿಂದ ಪಾದಚಾರಿಗಳು ತೊಂದರೆ ಅನುಭವಿಸಬೇಕಾಗಿದೆ.

ಈ ಕುರಿತು ರಿಪೋರ್ಟರ್ ಕರ್ನಾಟಕ ಮಾರ್ಚ್ 13 ಮತ್ತು ಮಾರ್ಚ್ 21ರ ಸಂಚಿಕೆಯಲ್ಲಿ ಸಚಿತ್ರ ವರದಿ ಮಾಡಿತ್ತು. ಇದರ ಪರಿಣಾಮ ಕೆಲವು ದಿನ ಇಲ್ಲಿನ ಫುಟ್ ಪಾತ್ ಗಳು ವಾಹನ ಮುಕ್ತವಾಗಿದ್ದರೂ ಇದೀಗ ಮತ್ತೆ ಅದೇ ದೃಶ್ಯ ಕೆಲವು ಕಡೆ ಕಂಡು ಬರಲಾರಂಭಿಸಿದೆ. ಮಂಗಳೂರು ಅನ್ ಲಾಕ್ ಆಗುತ್ತಿದ್ದಂತೆ ಫುಟ್ ಪಾತ್ ಗೆ ಅಡ್ಡವಾಗಿ ಕಾರು, ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದು ಶುರುವಾಗಿದೆ.

ಫುಟ್ ಪಾತ್ ನಲ್ಲಿ ಒಂದಿಬ್ಬರು ವಾಹನಗಳನ್ನು ನಿಲ್ಲಿಸಿದರೆ ಸಾಕು. ನಂತರ ವಾಹನಗಳ ಮಾಲೀಕರು ಸ್ಪರ್ಧೆಗೆ ಇಳಿದಂತೆ ತಮ್ಮ ವಾಹನಗಳನ್ನು ಫುಟ್ ಪಾತ್ ಏರಿಸುತ್ತಾರೆ. ಇವರಿಗಂತು ತಾನು ನಿಯಮ ಮುರಿಯುತ್ತಿದ್ದೇನೆ, ಕಾನೂನು ಉಲ್ಲಘಿಸುತ್ತಿದ್ದೇನೆ ಎಂಬ ಪಾಪ ಪ್ರಜ್ಞೆಯೇ ಇರುವುದಿಲ್ಲ. ಆದರೆ ಜನರು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಮಾಡುವ ಪೊಲೀಸ್ ಇಲಾಖೆಯಾದರೂ ಏನು ಮಾಡುತ್ತಿದೆ? ಟ್ರಾಫಿಕ್ ಪೊಲೀಸರು ಇಲ್ಲಿಗೆ ಡ್ಯೂಟಿಗೆ ಬರುವುದಿಲ್ವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು